ಜ್ಞಾನದೀಪ ತರಬೇತಿ ಸಂಸ್ಥೆಯಿಂದ ಇನ್ನಿಬ್ಬರು ನವೋದಯಕ್ಕೆ ಆಯ್ಕೆ

0

ಈ ವರ್ಷ ಒಟ್ಟು 20 ವಿದ್ಯಾರ್ಥಿಗಳು ನವೋದಯ ಶಾಲೆಗೆ ಆಯ್ಕೆ

2024-25ನೇ ಸಾಲಿನಲ್ಲಿ ಜವಾಹರ್ ನವೋದಯ ವಿದ್ಯಾಲಯದ ಪ್ರವೇಶ ಪಡೆಯಲು ಮೂರನೇ ಸುತ್ತಿನಲ್ಲಿ ಬೆಳ್ಳಾರೆ ಮತ್ತು ಸುಳ್ಯದ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ತರಬೇತಿ ಪಡೆದ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಈ ವರ್ಷದ ಶೈಕ್ಷಣಿಕ ಸಾಲಿನಲ್ಲಿ ಇಲ್ಲಿ ತರಬೇತಿ ಪಡೆದ ಒಟ್ಟು 20 ವಿದ್ಯಾರ್ಥಿಗಳು ನವೋದಯ ಪ್ರವೇಶಕ್ಕೆ ಅರ್ಹತೆ ಪಡೆದುಕೊಂಡಿದ್ದಾರೆ.

ಆಲೆಟ್ಟಿ ಗ್ರಾಮದ ಕೊಲ್ಚಾರು ವಸಂತ ಕೆ ಎ ಅವರ ಪುತ್ರಿ ಕೊಲ್ಚಾರು ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ತೃಪ್ತಿ ಕೆ ವಿ, ಕಳಂಜ ಗ್ರಾಮದ ಕಜೆಮೂಲೆ ಕೇಶವ ಕೆ ಮತ್ತು ಅನಿತಾ ಕೆ ದಂಪತಿಗಳ ಪುತ್ರಿ, ಕಾಣಿಯೂರು ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಯುಕ್ತಿ ಕೆ ಕೆ ನವೋದಯಕ್ಕೆ ಆಯ್ಕೆಯಾಗಿದ್ದಾರೆ. ಇದುವರೆಗೆ ಇಲ್ಲಿ ತರಬೇತಿ ಪಡೆದ ಒಟ್ಟು 205 ವಿದ್ಯಾರ್ಥಿಗಳು ನವೋದಯ ವಸತಿ ಶಾಲೆಗೆ ಆಯ್ಕೆಯಾಗಿದ್ದಾರೆ.

ವರದಿ : ಉಮೇಶ್ ಮಣಿಕ್ಕಾರ