ನ್ಯಾಯಾಲಯದಲ್ಲಿ ವಿಶೇಷ ಮಧ್ಯಸ್ಥಿಕಾ ಅಭಿಯಾನ

0

ರಾಜಿ ಮಾಡಿಕೊಳ್ಳಲು ಅಕ್ಟೊಬರ್ 7 ರವರೆಗೆ ಅವಕಾಶ

ನ್ಯಾಯಾಲಯದಲ್ಲಿ ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ ಎಂಬ ೯೦ ದಿನಗಳ ವಿಶೇಷ ಮಧ್ಯಸ್ಥಿಕಾ ಅಭಿಯಾನ ಜುಲೈಯಿಂದ ಪ್ರಾರಂಭವಾಗಿದ್ದು, ಅಕ್ಟೋಬರ್ ೭ರವರೆಗೆ ಈ ಅಭಿಯಾನ ನಡೆಯಲಿದೆ.

ಈ ಪ್ರಯುಕ್ತ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ಸಿವಿಲ್ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ಪ್ರಕರಣಗಳು, ವೈವಾಹಿಕ
ಹಾಗೂ ಕೌಟುಂಬಿಕ ನ್ಯಾಯಾಲಯದ
ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ವಾಣಿಜ್ಯ ಮತ್ತು ಸೇವಾ ಪ್ರಕರಣಗಳು,ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಗ್ರಾಹಕರ ವ್ಯಾಜ್ಯ ಪ್ರಕರಣಗಳು, ಡಿ.ಆರ್.ಟಿ ಪ್ರಕರಣಗಳು, ಭೂ-ಸ್ವಾಧೀನ ಪ್ರಕರಣಗಳು ಹಾಗೂ ‘ಇತರ ಸಿವಿಲ್ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿ-ಕೊಳ್ಳಲು ಅಭಿಯಾನದಲ್ಲಿ ಅವಕಾಶ ಕಲ್ಪಿಸಲಾಗಿದೆ.
ಪಲಾನುಭವಿಗಳು ಇದರ ಪ್ರಯೋಜನ ಪಡೆಯಬಹುದಾಗಿದೆ ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.