ಮಾಜೀ ಸಚಿವರೂ ಹಾಲೀ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ಶ್ರೀ ವಿನಯಕುಮಾರ್ ಸೊರಕೆ ಅವರ ನೇತ್ರತ್ವದಲ್ಲಿ ಎ.ಐ.ಸಿ.ಸಿ.ಯ ಹಾಗೂ ಕೆ.ಪಿ.ಸಿ.ಸಿಯ ನಿರ್ದೇಶನದಂತೆ ರಾಜ್ಯದ ಪ್ರತೀ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿಯನ್ನು ತಯಾರು ಮಾಡಿ ಪಕ್ಷದ ಮತ್ತು ಸರಕಾರದ ವಿವಿಧ ಜನಪರ ಯೋಜನೆಗಳ ಪ್ರಚಾರಕ್ಕೆ ಚುರುಕು ಮುಟ್ಟಿಸುವ ಕಾರ್ಯವು ನಡೆಯುತ್ತಿದೆ.
ಇದರಂತೆ ರಾಜ್ಯ ಪ್ರಚಾರ ಸಮಿತಿಯಿಂದ ವಿವಿಧ ಜಿಲ್ಲೆಗಳಿಗೆ ಉಸ್ತುವಾರಿಗಳನ್ನು ನೇಮಕ ಮಾಡಿದ್ದು ಇತ್ತೀಚೆಗಷ್ಟೆ ಎ.ಐ.ಸಿ.ಸಿ ಯಿಂದ ಕರ್ನಾಟಕ ಪ್ರದೇಶ್ ಕಾಂಗ್ರೆಸ್ಸಿನ ರಾಜ್ಯ ಪ್ರಚಾರ ಸಮಿತಿಯ ಮುಖ್ಯ ಸಂಯೋಜಕರು ಮತ್ತು ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗೆ ಉಸ್ತುವಾರಿ ಯಾಗಿ ನೇಮಕಗೊಂಡ ಶ್ರೀ ಕೆ.ಪಿ ಜಾನಿ ಯವರಿಂದ ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ನಾಯಕರ ಪ್ರಥಮ ಬೇಟಿ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ನೂತನ ಪ್ರಚಾರ ಸಮಿತಿಯನ್ನು ರಚಿಸುವ ಬಗ್ಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೇಶವ ರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪೂರ್ವಭಾವಿ ಸಮಾಲೋಚನಾ ಸಭೆಯು ಸೆ.೬ರಂದು ನಡೆಸಲಾಯಿತು.
ಸಭೆಯಲ್ಲಿ ನಿಯೋಜಿತ ಪ್ರಚಾರ ಸಮಿತಿ ಅಧ್ಯಕ್ಷ ನಾರಾಯಣ ಸ್ವಾಮಿ, ಬ್ಲಾಕ್ ಅಧ್ಯಕ್ಷರುಗಳು ಜಿಲ್ಲೆಯ ಎಲ್ಲಾ ಮುಂಚೂಣಿ ಘಟಕದ ನಾಯಕರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಜಾನಿ ಕೆ.ಪಿ ಯವರ ಜೊತೆಯಲ್ಲಿ ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾದ ಎ.ಕೆ.ಇಬ್ರಾಹಿಂ.ಹಾಗೂ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ತಾನ ಆಡಳಿತ ಸಮಿತಿಯ ನಿರ್ದೇಶಕರಾದ ವಸಂತ ಪೆಲ್ತಡ್ಕ ಉಪಸ್ಥಿತರಿದ್ದರು.



















