ಸುಬ್ರಹ್ಮಣ್ಯ : ಕುಮಾರ ಪರ್ವತ ಚಾರಣ ಆರಂಭ

0

ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಚಾರಣ ತಾಣ ಕುಮಾರಪರ್ವತ ಚಾರಣ ಸೆ.19 ರಂದು ಆರಂಭಗೊಂಡಿದ್ದು, ಕಳೆದ ವರ್ಷದ ನಿಯಮಾವಳಿಗಳಂತೆ ಚಾರಣ ಕೈಗೊಳ್ಳಬಹುದಾಗಿದೆ.


ಕುಮಾರ ಪರ್ವತ ಚಾರಣ ಮಳೆಗಾಲ ಮುನ್ನ ಸ್ಥಗಿತಮಾಡಲಾಗಿದ್ದು ಇದೀಗ ಈ ವರ್ಷದ ಚಾರಣ ಮರು ಆರಂಭಗೊಂಡಿದೆ. ಅದರಂತೆ ಮೊದಲ ದಿನ ಸುಮಾರು 20 ರಷ್ಟು ಚಾರಣಿಗರು ಕುಮಾರಪರ್ವತ ಚಾರಣ ಕೈಗೊಂಡರು. ಸುಬ್ರಹ್ಮಣ್ಯದ ದೇವರಗದ್ದೆ ಮೂಲಕ ಚಾರಣ ಆರಂಭಿಸಿದ ಚಾರಣಿಗರಿಗೆ ಪುಷ್ಪಗಿರಿ ವನ್ಯಜೀವಿ ವಲಯದ ವತಿಯಿಂದ ಹೂಗುಚ್ಚ ನೀಡಿ ಶುಭಾಶಯ ಕೋರಲಾಯಿತು. ಹಾಗೂ ಚಾರಣದ ಸಮಯದಲ್ಲಿ ಜಾಗೃತೆಯಿಂದ ಚಾರಣ ಮಾಡಿ ಪ್ಲಾಸ್ಟಿಕ್ ಮುಕ್ತ ಕುಮಾರ ಪರ್ವತಕ್ಕೆ ಸಹಕರಿಸುವಂತೆ ಅಧಿಕಾರಿಗಳು, ಸಿಬ್ಬಂದಿಗಳು ಮಾರ್ಗದರ್ಶನ ನೀಡಿದರು.


ಕುಮಾರಪರ್ವತ ಚಾರಣ ಕೈಗೊಳ್ಳಲು ಅರಣ್ಯ ವಿಹಾರ ಅರಣ್ಯ ಇಲಾಖೆಯ ವೆಬ್ಸೈಟ್ ಮೂಲಕ ನೋಂದಾಣಿ ಮಾಡಿ ಚಾರಣ ಕೈಗೊಳ್ಳಬೇಕಾಗಿದ್ದು, ನಿಗಧಿತ ಮಿತಿ ಹಾಗೂ ಮಾರ್ಗಸೂಚಿಗಕಲ ಅನ್ವಯ ಪರಿಸರ ಸ್ನೇಹಿ ಚಾರಣ ಕೈಗೊಳ್ಳಲು ಅವಕಾಶ ನೀಡಲಾಗಿದೆ. ಈ ವರ್ಷ ಎಂದಿಗಿಂತ 10 ದಿನ ಮೊದಲು ಚಾರಣ ಆರಂಭಗೊಂಡಿದೆ. ಸುಬ್ರಹ್ಮಣ್ಯ ಫಾರೆಸ್ಟ್ ಚೆಕ್ ಪೋಸ್ಟ್ ನಲ್ಲಿ ಆರಂಭವಾಗಿರುವ ಕುಮಾರ ಪರ್ವತ ಚಾರಣಕ್ಕೆ ಆಗಮಿಸಿದ ಮೊದಲ ದಿನ ಚಾರಣಿಗರಿಗೆ ಪುಷ್ಪಗಿರಿ ವನ್ಯಜೀವಿ ವಲಯದ ವತಿಯಿಂದ ಹೂಗುಚ್ಚ ನೀಡಿ ಶುಭಾಶಯ ಕೋರಲಾಯಿತು.


ಹಾಗೂ ಚಾರಣದ ಸಮಯದಲ್ಲಿ ಜಾಗೃತೆಯಿಂದ ಚಾರಣ ಮಾಡಿ ಪ್ಲಾಸ್ಟಿಕ್ ಮುಕ್ತ ಕುಮಾರ ಪರ್ವತಕ್ಕೆ ಸಹಕರಿಸುವಂತೆ ತಿಳಿಸಲಾಯಿತು.