ಕ್ಯಾಂಪ್ಕೋ ಸಂಸ್ಥೆಯ ‘ಸಾಂತ್ವನ’ ಎಂಬ ಯೋಜನೆಯಡಿಯಲ್ಲಿ ಆರ್ಥಿಕ ನೆರವಿನ ಚೆಕ್ ಹಸ್ತಾಂತರ

0


ಕ್ಯಾಂಪ್ಕೋ ಸಂಸ್ಥೆಯ ‘ಸಾಂತ್ವನ’ ಎಂಬ ಯೋಜನೆಯಡಿಯಲ್ಲಿ ಆರ್ಥಿಕ ನೆರವಿನ ಚೆಕ್ ಹಸ್ತಾಂತರ ಕಾರ್ಯಕ್ರಮವು ಸೆ. ೨೫ ರಂದು ಸುಳ್ಯ ಶಾಖೆಯಲ್ಲಿ ನಡೆಯಿತು. ಕ್ಯಾಂಪ್ಕೋ ಸಂಸ್ಥೆ ಸುಳ್ಯ ಶಾಖೆಯ ಸಕ್ರಿಯ ಸದಸ್ಯರಾದ ಶಿವರಾಮ ಮಡಪ್ಪಾಡಿ ಇವರ ಆಂಜಿಯೋಪ್ಲ್ಯಾಸ್ಟಿ ಶಸ್ತ್ರಕ್ರಿಯೆಗೆ ಸಹಾಯಧನದ ಮೊತ್ತ ರೂ. ೫೦,೦೦೦/- (ರೂಪಾಯಿ ಐವತ್ತು ಸಾವಿರ ) ದ ಚೆಕ್ಕನ್ನು ಕ್ಯಾಂಪ್ಕೋ ಸಂಸ್ಥೆಯ ನಿರ್ದೇಶಕರಾದ ಕೃಷ್ಣಪ್ರಸಾದ್ ಮಡ್ತಿಲರವರು ಸೆ. ೨೫ ರಂದು ಶಿವರಾಮ ಮಡಪ್ಪಾಡಿ ಯವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸುಳ್ಯ ಶಾಖೆಯ ಪ್ರಬಂಧಕರಾದ ಸೀನಿಯರ್ ಮ್ಯಾನೇಜರ್ ಸಂತೋಷ್ ಪಿ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.