ಸವಣೂರು ಸೀತಾರಾಮ ರೈ ಅವರಿಗೆ ರಾಜ್ಯಮಟ್ಟದ ಗಾಂಧಿ ಸ್ಮೃತಿ ಪ್ರಶಸ್ತಿ ಪ್ರದಾನ

0

ಗಾಂಧೀ ಚಿಂತನೆಗಳನ್ನು ಮತ್ತು ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡವರು ಸೀತಾರಾಮ ರೈ : ಅಣ್ಣಾ ವಿನಯಚಂದ್ರ

” ಮಹಾತ್ಮ ಗಾಂಧೀಜಿಯವರ ಚಿಂತನೆಗಳನ್ನು ಮತ್ತು ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡವರು ಸವಣೂರು ಸೀತಾರಾಮ ರೈ ಯವರು” ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಅಣ್ಣಾ ವಿನಯಚಂದ್ರ ಹೇಳಿದರು.

ಅವರು ಸುಳ್ಯ ಗಾಂಧಿ ಚಿಂತನ ವೇದಿಕೆ ವತಿಯಿಂದ ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ , ಸಹಕಾರ ರತ್ನ ಕೆ. ಸೀತಾರಾಮ ರೈ ಸವಣೂರು ರವರಿಗೆ ರಶ್ಮಿ ನಿವಾಸದಲ್ಲಿ ರಾಜ್ಯಮಟ್ಟದ ಗಾಂಧಿ ಸ್ಮೃತಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಅಭಿನಂದನಾ ಭಾಷಣ ಮಾಡಿದ ಗಾಂಧಿ ಚಿಂತನ ವೇದಿಕೆ ಸಂಚಾಲಕ ಚಂದ್ರಶೇಖರ ಪೇರಾಲು ಮಾತನಾಡಿ, ” ಸವಣೂರು ಸೀತಾರಾಮ ರೈಯವರು ಗಾಂಧೀಜಿಯವರ ಗ್ರಾಮ ಸ್ವರಾಜ್ಯ, ಶಿಸ್ತು , ಸಮಯ ಪಾಲನೆ, ಸಹಕಾರ ಮನೋಭಾವನೆಯನ್ನು ಪಾಲಿಸಿಕೊಂಡು, ಸರಳತೆಯನ್ನು ಜೀವನದಲ್ಲಿ ಅಳವಡಿಸಿಕೊಂಡು ಶಿಕ್ಷಣ , ಸಹಕಾರ, ಧಾರ್ಮಿಕ , ಸಾಮಾಜಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡು ನಾಡಿಗೆ ಆದರ್ಶಪ್ರಾಯರಾಗಿದ್ದಾರೆ” ಎಂದರು.

ವೇದಿಕೆಯ ಪ್ರಧಾನ ಸಂಚಾಲಕ ಹರೀಶ್ ಬಂಟ್ವಾಳ್ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಹಿರಿಯ ನಿರ್ದೇಶಕರಾದ ಚಿಕ್ಕಪ್ಪ ನಾಯ್ಕ್ ಅರಿಯಡ್ಕ, ವಿಜಯ ಬ್ಯಾಂಕ್ ನಿವೃತ್ತ ಅಧಿಕಾರಿ ಎ.ಕೃಷ್ಣ ರೈ ಪುಣ್ಚಪ್ಪಾಡಿ ಅತಿಥಿಗಳಾಗಿ ಉಪಸ್ಥಿತರಿದ್ದರು. ಗಾಂಧಿ ಚಿಂತನ ವೇದಿಕೆಯ ಸಂಚಾಲಕರಾದ ಕೆ.ಆರ್.ಗೋಪಾಲಕೃಷ್ಣರು ಆಶಯ ಗೀತೆ ಹಾಗೂ ಹಾರೈಕೆ ಗೀತೆ ಹಾಡಿದರು. ಚಂದ್ರಾವತಿ ಬಡ್ಡಡ್ಕ, ಬಾಪು ಸಾಹೇಬ್ ಸುಳ್ಯ ಉಪಸ್ಥಿತರಿದ್ದರು.

ಗಾಂಧಿ ಚಿಂತನ ವೇದಿಕೆಯ ಸ್ಥಾಪಕ ಸಂಚಾಲಕ ಡಾ.ಸುಂದರ ಕೇನಾಜೆ ಪ್ರಾಸ್ತಾವಿಕ ಮಾತುಗಳನ್ನಾಡಿ ಚಿಂತನ ವೇದಿಕೆ ಮತ್ತು ಗಾಂಧಿ ಸ್ಮೃತಿ ಪ್ರಶಸ್ತಿಯ ಬಗ್ಗೆ ವಿವರ ನೀಡಿದರು.
ಸವಣೂರು ಸಿ.ಎ.ಬ್ಯಾಂಕ್ ಸಿ.ಇ.ಓ. ಚಂದ್ರಶೇಖರ ಪಿ. ಸ್ವಾಗತಿಸಿದರು. ಗಾಂಧಿ ಚಿಂತನ ವೇದಿಕೆಯ ಸಂಚಾಲಕ ಶಂಕರ್ ಪೆರಾಜೆ ವಂದಿಸಿದರು. ಇನ್ನೋರ್ವ ಸಂಚಾಲಕ ದಿನೇಶ್ ಮಡಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು.