ಬಿಜೆಪಿ ಪಕ್ಷದಿಂದ ಮತಕಳ್ಳತನ ಆರೋಪ- ಸಂಪಾಜೆಯಲ್ಲಿ ಕಾಂಗ್ರೆಸ್ ನಿಂದ ಸಾಮೂಹಿಕ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ

0

ಬಿಜೆಪಿ ಪಕ್ಷ ದಿಂದ ಮತಕಳ್ಳತನ ನಡೆಯುತ್ತಿದೆ ಎಂದು ಆರೋಪಿಸಿ ಸಾರ್ವಜನಿಕರಿಂದ ಸಾಮೂಹಿಕ ಸಹಿಸಂಗ್ರಹ ಅಭಿಯಾನಕ್ಕೆ ಸಂಪಾಜೆ ವಲಯ ಕಾಂಗ್ರೆಸ್ ವತಿಯಿಂದ ಚಾಲನೆ ನೀಡಲಾಯಿತು.

ಈ ಕಾರ್ಯಕ್ರಮದಲ್ಲಿ ಕೆ.ಪಿ.ಸಿ.ಸಿ ಪ್ರಚಾರ ಸಮಿತಿಯ ಮುಖ್ಯ ಸಂಯೋಜಕರಾದ ಕೆ.ಪಿ ಜಾನಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಕುಂಞಿ ಗೂನಡ್ಕ, ಜಿಲ್ಲಾ ಅಲ್ಪಸಂಖ್ಯಾತ ಕಾಂಗ್ರೆಸ್ ಘಟಕದ ಉಪಾಧ್ಯಕ್ಷರಾದ ಎ.ಕೆ.ಇಬ್ರಾಹಿಂ ,ಸುಳ್ಯ ತಾಲೂಕು ಅಲ್ಪಸಂಖ್ಯಾತ ಘಟಕದ ಕೋಶಾಧಿಕಾರಿಗಳಾದ ತಾಜ್ ಮಹಮ್ಮದ್ ,ಸಂಪಾಜೆ ವಲಯ ಕಾಂಗ್ರೆಸ್ ಉಪಾಧ್ಯಕ್ಷರಾದ ವಸಂತ ಪೆಲ್ತಡ್ಕ ,ಸಂಪಾಜೆ ವಲಯ ಅಲ್ಪಸಂಖ್ಯಾತ ಕಾಂಗ್ರೆಸ್ ಅಧ್ಯಕ್ಷರಾದ ಎ.ಕೆ.ಹನೀಫ್ ಉಪಸ್ಥಿತರಿದ್ದರು ಮತ್ತು ಸಂಪಾಜೆಯ ನಾಗರಿಕರಿಂದ ಸಹಿಸಂಗ್ರಹ ಕಾರ್ಯಕ್ರಮ ನಡೆಯಿತು.