ಕರ್ನಾಟಕ ರಾಜ್ಯ ಸಾಫ್ಟ್ ಬಾಲ್ ಕ್ರಿಕೆಟ್ ಪಂದ್ಯಾಟಕ್ಕೆ ವೀಕ್ಷಕ ವಿವರಣೆಗಾರರಾಗಿ ದ. ಕ. ಜಿಲ್ಲೆಯಿಂದ ಸುಕುಮಾರ್ ಕಂದ್ರಪ್ಪಾಡಿ ಆಯ್ಕೆ

0

ಕರ್ನಾಟಕ ರಾಜ್ಯ ಸಾಫ್ಟ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ಇದರ ಆಶ್ರಯದಲ್ಲಿ ಕರ್ನಾಟಕದ 31 ಜಿಲ್ಲೆಗಳ 32 ತಂಡಗಳ 2ನೇ ಆವೃತ್ತಿಯ “KSPL-2025” ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಬೆಂಗಳೂರಿನ ಕಿಣಿ ಕ್ರೀಡಾಂಗಣದಲ್ಲಿ ನ. 1ರಿಂದ ನ. 28ರ ವರೆಗೆ ನಡೆಯಲಿದೆ.

ಒಂದು ತಿಂಗಳುಗಳ ಕಾಲ ನಡೆಯುವ ಈ ಕ್ರಿಕೆಟ್ ಪಂದ್ಯಾಟಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಸುಳ್ಯ ತಾಲೂಕು ದೇವಚಳ್ಳ ಗ್ರಾಮದ ಸುಕುಮಾರ್ ಕಂದ್ರಪ್ಪಾಡಿ ಇವರು ವೀಕ್ಷಕ ವಿವರಣೆಗಾರರಾಗಿ ಆಯ್ಕೆಯಾಗಿರುತ್ತಾರೆ. ಈ ಒಂದು ಪಂದ್ಯಾಟ ಡಿಡಿ ಸ್ಪೋರ್ಟ್ಸ್ ಮತ್ತು ರಾಜ್ ಮ್ಯೂಸಿಕ್ ಕನ್ನಡ ಚಾನೆಲ್ ನಲ್ಲಿ ನೇರ ಪ್ರಸಾರವಿದೆ. ಸುಕುಮಾರ್ ಕಳೆದ 14 ವರ್ಷಗಳಿಂದ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಇವರು ವೀಕ್ಷಕ ವಿವರಣೆ ನೀಡಿರುತ್ತಾರೆ. ಪ್ರಸ್ತುತ ಉದ್ಯೋಗ ನಿಮಿತ್ತ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಇವರು ಕಂದ್ರಪ್ಪಾಡಿ ಅಣ್ಣಪ್ಪ ಮತ್ತು ಶ್ರೀಮತಿ ಜಾನಕಿ ದಂಪತಿಗಳ ಪುತ್ರ.