ಗೋವಿನ ಕೈಂಕರ್ಯ ಪುಣ್ಯದ ಕಾರ್ಯ : ಹಾರಿಕಾ ಮಂಜುನಾಥ್
ವಿಶ್ವ ಹಿಂದೂ ಪರಿಷದ್ ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ ಸುಳ್ಯ ಪ್ರಖಂಡ, ಅಯೋಧ್ಯೆ ಶಾಖೆ ಎಲಿಮಲೆ ಇದರ ಆಶ್ರಯದಲ್ಲಿ ಆರನೇ ವರ್ಷ ಸಾರ್ವಜನಿಕ ಗೋಪೂಜಾ ಕಾರ್ಯಕ್ರಮವು ನ. 2 ರಂದು ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯ ವಠಾರದಲ್ಲಿ ನಡೆಯಿತು.
ಸಂಜೆ ಭಜನಾ ಕಾರ್ಯಕ್ರಮ, ನಂತರ ಸಾರ್ವಜನಿಕ ಗೋಪೂಜಾ ಕಾರ್ಯಕ್ರಮ, ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.

ನಾರಾಯಣ ಗೌಡ ಅಂಬೆಕಲ್ಲು ಕಾರ್ಯಕ್ರಮ ಉದ್ಘಾಟಿಸಿದರು. ವಿ.ಹಿಂ.ಪ. ಅಯೋಧ್ಯೆ ಶಾಖೆ ಎಲಿಮಲೆ ಇದರ ಅಧ್ಯಕ್ಷ ಭೋಜಪ್ಪ ಗೌಡ ಹರ್ಲಡ್ಕ ಅಧ್ಯಕ್ಷತೆ ವಹಿಸಿದ್ದರು.








ಖ್ಯಾತ ವಾಗ್ಮಿ ಹಾರಿಕಾ ಮಂಜುನಾಥ್ ಧಾರ್ಮಿಕ ಉಪನ್ಯಾಸ ನೀಡಿದರು. ಗೋವಿನ ಕೈಂಕರ್ಯ ಪುಣ್ಯದ ಕಾರ್ಯ. ಗೋ ಸಂಪತ್ತು ಉಳಿಸುವ ಕಾರ್ಯಕ್ಕೆ ಸಮಾಜ ಕೈಜೋಡಿಸಬೇಕು. ನಮ್ಮ ಸಂಸ್ಕಾರದ ಎಲ್ಲ ಗುರುತುಗಳನ್ನು ಹಿಂದೂ ಸಮಾಜ ಕಾಪಿಟ್ಟುಕೊಳ್ಳಬೇಕು ಎಂದು ಅವರು ಹೇಳಿದರು.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಂಘ ಚಾಲಕ ಚಂದ್ರಶೇಖರ ತಳೂರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಮಾಧವ ದಾಸನಕಜೆ, ವಿ.ಹಿ.ಪ. ಸುಳ್ಯ ಪ್ರಖಂಡದ ಅಧ್ಯಕ್ಷ ಶ್ರೀಕಾಂತ್ ಗೋಳ್ವಾಲ್ಕರ್, ವಿ.ಹಿಂ.ಪ. ಪುತ್ತೂರು ಜಿಲ್ಲಾ ಸಹಕಾರ್ಯದರ್ಶಿ ಪ್ರಮೋದ್ ರೈ ಕಡಬ, ಬಜರಂಗದಳ ಸುಳ್ಯ ಪ್ರಖಂಡದ ಕಾರ್ಯದರ್ಶಿ ನವೀನ್ ಎಲಿಮಲೆ, ಬಜರಂಗದಳ ಸುಳ್ಯ ಪ್ರಖಂಡದ ಸಂಚಾಲಕ ಹರಿಪ್ರಸಾದ್ ಎಲಿಮಲೆ ಗೌರವ ಉಪಸ್ಥಿತರಿದ್ದರು.
ಉತ್ತಮ ಜಿಲ್ಲಾ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಶ್ರೀಧರ ಗೌಡ ಕೆರೆಮೂಲೆ, ಸೈನಿಕ ಶಶಿಶೇಖರ ಕಲ್ಲುಕಟ್ಟ ,ರಾಷ್ಟ್ರೀಯ ಕಬಡ್ಡಿ ಕ್ರೀಡಾಪಟು ರಶ್ಮಿ ಕೇಪಳಕಜೆಯವರನ್ನು ಸನ್ಮಾನಿಸಲಾಯಿತು.
ಕುಲದೀಪ್ ಹರ್ಲಡ್ಕ ಸ್ವಾಗತಿಸಿ ವಂದಿಸಿದರು. ಉದಯ ಕುಮಾರ್ ಚಳ್ಳ ಕಾರ್ಯಕ್ರಮ ನಿರೂಪಿಸಿದರು.
ವಿಶ್ವ ಹಿಂದೂ ಪರಿಷದ್ ಕಾರ್ಯದರ್ಶಿ ಸುನಿಲ್ ಸುಳ್ಳಿ, ಗೋರಕ್ಷಾ ಪ್ರಮುಖ್ ನಾಗರಾಜ ಕೇಪಳಕಜೆ, ದುರ್ಗಾವಾಹಿನಿ ಸಂಯೋಜಕಿ ಜಯಂತಿ ಎಲಿಮಲೆ, ಮಾತೃಶಕ್ತಿ ಸಂಯೋಜಕಿ ಶಶಿಕಲಾ ಕಾಡುಜಬಳೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದ ಬಳಿಕ ದಿನೇಶ್ ಕೋಡಪದವು ಸಾರಥ್ಯದಲ್ಲಿ “ಯಕ್ಷ ತೆಲಿಕೆ” ಯಕ್ಷ ಹಾಸ್ಯ ವೈಭವ ನಡೆಯಿತು.










