ಇಂದಿನಿಂದ ಪಂಜ-ಗರಡಿಬೈಲು ಮೂಲಸ್ಥಾನದಲ್ಲಿ ಶ್ರೀ ಕಾಚುಕುಜುಂಬ ದೈವದ ಪುನಃ ಪ್ರತಿಷ್ಠಾ ಕಲಶ

0

ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಪಂಬೆತ್ತಾಡಿ ಗ್ರಾಮದ ಗರಡಿಬೈಲಿನಲ್ಲಿ ಶ್ರೀ ಕಾಚುಕುಜುಂಬ ದೈವದ
ಪುನಃ ಪ್ರತಿಷ್ಠಾ ಕಲಶ ಡಿ. 03, 04 ಮತ್ತು 05 ರಂದು ನಡೆಯಲಿದೆ.


ಡಿ.03 ರಂದು ಪೂರ್ವಾಹ್ನ ಶ್ರೀ ಉಳ್ಳಾಕ್ಲು, ಶ್ರೀ ಕಾಚುಕುಜುಂಬ ದೈವಗಳ ಮೂಲಸ್ಥಾನದಲ್ಲಿ ಶ್ರೀ ಕಾಚುಕುಜುಂಬ ದೈವದ ಪುನಃ ಪ್ರತಿಷ್ಠಾ ಕಲಶಾಭಿಷೇಕ ಅಂಗವಾಗಿ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಹಾಗೂ ಗರಡಿ ಬೈಲ್ ಶ್ರೀ ಉಳ್ಳಾಕ್ಲು, ಕಾಚು ಕುಜುಂಬ ಸನ್ನಿಧಿಯಲ್ಲಿ ಶ್ರೀ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಪ್ರಾರ್ಥನೆ ನಡೆಯಿತು.

ಶ್ರೀ ದೇಗುಲದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್, ಕಾಚು ಕುಜುಂಬ ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಪರಮೇಶ್ವರ ಬಿಳಿಮಲೆ, ಗೌರವ ಸಲಹೆಗಾರರಾದ ಮಹೇಶ್ ಕುಮಾರ್ ಕರಿಕಳ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸಂತೋಷ್ ಕುಮಾರ್ ರೈ ಪಲ್ಲತ್ತಡ್ಕ, ಸತ್ಯ ನಾರಾಯಣ ಭಟ್ ಕಾಯಂಬಾಡಿ, ಧರ್ಮಣ್ಣ ನಾಯ್ಕ ಗರಡಿ, ಮಾಯಿಲಪ್ಪ ಗೌಡ ಪಟ್ಟೆಎಣ್ಮೂರು,ಧರ್ಮಪಾಲ ಗೌಡ ಮರಕ್ಕಡ, ಪವಿತ್ರ ಮಲ್ಲೆಟ್ಟಿ, ಮಾಲಿನಿ ಕುದ್ವ, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಆನಂದ ಗೌಡ ಜಳಕದ ಹೊಳೆ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

ಪ್ರಾರ್ಥನೆ ಬಳಿಕ ಯ ಆಚಾರ್ಯವರಣ, ಪುಣ್ಯಾಹವಾಚನ, ಮಹಾಗಣಪತಿ ಹೋಮ, ಮೃತ್ಯುಂಜಯ ಹೋಮ, ಆಶ್ಲೇಷ ಬಲಿ, ಮಧ್ಯಾಹ್ನ ಗಂಟೆ 12 ರಿಂದ ಹೋಮದ ಪೂರ್ಣಾಹುತಿ, ಪ್ರಸಾದ ವಿತರಣೆ, ಅನ್ನಪ್ರಸಾದ ವಿತರಣೆ ನಡೆಯಿತು.

ಸಂಜೆ ಗಂಟೆ 5:30ರಿಂದ ದುರ್ಗಾಪೂಜೆ, ಸುದರ್ಶನ ಹೋಮ, ಅಘೋರ ಹೋಮ, ವನದುರ್ಗಾ ಹೋಮ, ರಾತ್ರಿ ಗಂಟೆ 8:30ರಿಂದ ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಲಿದೆ.


ಡಿ.04 ರಂದು ಸಂಜೆ ಗಂಟೆ 5:30ರಿಂದ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ ಪುಣ್ಯಾಹವಾಚನ, ಪ್ರಾಸಾದ ಶುದ್ದಿ, ರಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಬಲಿ, ಪ್ರಾಕಾರ ಬಲಿ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಲಿದೆ.

ಡಿ. 05ರಂದು ಪೂರ್ವಾಹ್ನ ಗಂಟೆ 7:30ರಿಂದ ಮಹಾಗಣಪತಿ ಹೋಮ, ಕಲಶ ಪೂಜೆ ದಿವಾ ಗಂಟೆ 10:29ರಿಂದ 11:30ರ ತನಕ ನಡೆಯುವ ಮಕರ ಲಗ್ನದ ಶುಭ ಮುಹೂರ್ತದಲ್ಲಿ ಶ್ರೀ ಕಾಚುಕುಜುಂಬ ದೈವದ ಪುನಃ ಪ್ರತಿಷ್ಠಾ ಕಲಶಾಭಿಷೇಕ ತಂಬಿಲ ಸೇವೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಲಿದೆ.