⬆️ ಇಂದು (ಡಿ.5) ಮೂಲಸ್ಥಾನದಲ್ಲಿ ಶ್ರೀ ಕಾಚುಕುಜುಂಬ ದೈವದ ಪುನಃ ಪ್ರತಿಷ್ಠೆ


ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಪಂಬೆತ್ತಾಡಿ ಗ್ರಾಮದ ಗರಡಿಬೈಲಿನಲ್ಲಿ
ಶ್ರೀ ಕಾಚುಕುಜುಂಬ ದೈವದ ದೈವಸ್ಥಾನ ಪುನ: ನಿರ್ಮಾಣ ಗೊಂಡು
ಪುನಃ ಪ್ರತಿಷ್ಠಾ ಕಲಶ ಪ್ರಯುಕ್ತ ಡಿ. 03 ಮತ್ತು 04 ರಂದು ವಿವಿಧ ವೈಧಿಕ ಧಾರ್ಮಿಕ ಕಾರ್ಯಕ್ರಮಗಳು ಬ್ರಹ ಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆದು. ಇಂದು ಡಿ. 05 ರಂದು 10: 29ರಿಂದ 11:30ರ ತನಕ ನಡೆಯುವ ಮಕರ ಲಗ್ನದ ಶುಭ ಮುಹೂರ್ತದಲ್ಲಿ ಶ್ರೀ ಕಾಚುಕುಜುಂಬ ದೈವದ ಪುನಃ ಪ್ರತಿಷ್ಠೆ ನಡೆಯಲಿದೆ.
















ಡಿ.04 ರಂದು ಸಂಜೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ ಪುಣ್ಯಾಹವಾಚನ, ಪ್ರಾಸಾದ ಶುದ್ದಿ, ರಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಬಲಿ, ಪ್ರಾಕಾರ ಬಲಿ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು. ಡಿ. 05ರಂದು ಪೂರ್ವಾಹ್ನ ಮಹಾಗಣಪತಿ ಹೋಮ, ಕಲಶ ಪೂಜೆ ದಿವಾ ಗಂಟೆ 10:29ರಿಂದ 11:30ರ ತನಕ ನಡೆಯುವ ಮಕರ ಲಗ್ನದ ಶುಭ ಮುಹೂರ್ತದಲ್ಲಿ ಶ್ರೀ ಕಾಚುಕುಜುಂಬ ದೈವದ ಪುನಃ ಪ್ರತಿಷ್ಠಾ ಕಲಶಾಭಿಷೇಕ ತಂಬಿಲ ಸೇವೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಲಿದೆ.











