ಜೂ. 30ರ ಭಾರೀ ಮಳೆ ಹಿನ್ನಲೆ – ವಿದ್ಯಾರ್ಥಿಗಳು ಶಾಲೆಗೆ ಬರುವುದು ಕಡ್ಡಾಯವಲ್ಲ- ಜಿಲ್ಲಾಡಳಿತ ಸೂಚನೆ

0


ಪುತ್ತೂರು: ದ.ಕ ಜಿಲ್ಲೆಯಲ್ಲಿ ಜೂ. 30ರಂದು ಭಾರೀ ಮಳೆ ಕಾರಣ ವಿದ್ಯಾರ್ಥಿಗಳು ಶಾಲೆಗೆ ಬರುವುದು ಕಡ್ಡಾಯವಲ್ಲ ಮತ್ತು ಶಾಲೆಗೆ ಬಂದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಶಾಲೆಯಲ್ಲೇ ಉಳಿಸಿಕೊಳ್ಳುವ ಕುರಿತು ಜಿಲ್ಲಾಡಳಿತ ತಾಲೂಕು ಆಡಳಿತಕ್ಕೆ ಸೂಚನೆ ನೀಡಿದೆ ಎಂದು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಲೋಕೇಶ್ ಅವರು ತಿಳಿಸಿದ್ದಾರೆ.

ಜೂ. 30ರಂದು ಬೆಳಗ್ಗಿನಿಂದಲೇ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲಾಧಿಕಾರಿಯವರು ತಾಲೂಕು ಆಡಳಿತದೊಂದಿಗೆ ಚರ್ಚಿಸಿದೆ. ಹಾಗಾಗಿ ತಕ್ಷಣ ಸೂಚನೆ ನೀಡಿದ್ದು, ಶಾಲೆಗೆ ಬಂದಿರುವ ವಿದ್ಯಾರ್ಥಿಗಳನ್ನು ಶಾಲೆಯಲ್ಲೇ ಸುರಕ್ಷಿತವಾಗಿ ಉಳಿಸಿಕೊಂಡು ಇನ್ನೂ ಕೆಲವರು ಶಾಲೆಗೆ ಬರುವುದು ಕಡ್ಡಾಯವಲ್ಲ ಎಂದು ಈಗಾಗಲೇ ತಿಳಿಸಲಾಗಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿರುವುದಾಗಿ ತಿಳಿಸಿದ್ದಾರೆ.