ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಮ್ಮಾಜೆ, ಕಲ್ಲಬೆಟ್ಟು, ನೆಲ್ಲಿತೀರ್ಥ, ಗುರುಪುರ, ಬೆಳ್ತಂಗಡಿಯ ಮಚ್ಚಿನ, ಮುಂಡಾಜೆ, ಹೊಸಂಗಡಿ, ಬಂಟ್ವಾಳದ ವಗ್ಗ, ಪುತ್ತೂರಿನ ಬಲ್ನಾಡು, ಉಪ್ಪಿನಂಗಡಿ ಹಾಗೂ ಸುಳ್ಯದ ಪಂಜ ಮೊರಾರ್ಜಿ ದೇಸಾಯಿ/ಡಾ| ಬಿ.ಆರ್ ಅಂಬೇಡ್ಕರ್/ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗಳಿಗೆ 6 ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಕೆಯನ್ನು ಪುನಃ ಆರಂಭಿಸಲಾಗಿದೆ.
ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 6 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.6 ರಿಂದ 10ನೇ ತರಗತಿಯವರೆಗೆ ಆಂಗ್ಲ ಮಾಧ್ಯದಲ್ಲಿ ವ್ಯಾಸಂಗ ಮಾಡಲು ಪ್ರತಿಭಾನ್ವಿತ ಗ್ರಾಮೀಣ ವಿದ್ಯಾರ್ಥಿಗಳಿಗೆ ಇಲ್ಲಿ ಅವಕಾಶ ಕಲ್ಪಿಸಲಾಗಿದೆ. ಈ ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕವಿಲ್ಲದೇ ಊಟ, ವಸತಿ, ಸಮವಸ್ತ್ರ, ಪಠ್ಯ ಪುಸ್ತಕ ಹಾಗೂ ಇನ್ನಿತರ ಸಮಾಗ್ರಿಗಳನ್ನು ನೀಡಲಾಗುವುದು. ಅಭ್ಯರ್ಥಿಯು ತನ್ನ ಎಸ್.ಎ.ಟಿ.ಎಸ್. ಸಂಖ್ಯೆ, ಭಾವಚಿತ್ರ, ಜಾತಿ/ಆದಾಯ ಪ್ರಮಾಣ ಪತ್ರ, ಆಧಾರ್ ಹಾಗೂ ಸಂಬಂಧಿತ ಇತರೆ ದಾಖಲೆಗಳೊಂದಿಗೆ ಹತ್ತಿರ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಿ, ವಸತಿ ಶಾಲೆಯಲ್ಲಿಯೇ ಅನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25-08-2020 ಆಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಹುದು.
ದೂರವಾಣಿ ಸಂಖ್ಯೆ : 9161063223