ಪಂಜದ ಯುವಕನೋರ್ವ ಬೆಂಗಳೂರಿನ ತನ್ನ ರೂಂನಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನ. 26 ರಂದು ವರದಿಯಾಗಿದೆ.
ಪಂಜದ ಬರೆಮೇಲು ಮೋನಪ್ಪ ಗೌಡ ಮತ್ತು ಹೇಮಾವತಿ ದಂಪತಿಗಳ ಪುತ್ರ ಜತಿನ್ ಕುಮಾರ್ (ದೀಕ್ಷಿತ್) ಆತ್ಮಹತ್ಯೆ ಮಾಡಿಕೊಂಡಾತ.
ಬೆಂಗಳೂರಿನಲ್ಲಿ ಹುಂಡೈ ಕಂಪೆನಿಯ ಉದ್ಯೋಗಿಯಾಗಿರುವ ಜತಿನ್ ಕುಮಾರ್ ನ.26 ರಂದು ಸಂಜೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ ವಿಷಯ ಬೆಳಕಿಗೆ ಬಂದಿದ್ದು, ಸಂಬಂಧಿಕರು ಬಂದು ಆತನನ್ನು ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆನ್ನಲಾಗಿದೆ. ಅವರಿಗೆ 30 ವರ್ಷ ವಯಸ್ಸಾಗಿತ್ತು.
ಮೃತರು ತಂದೆ, ತಾಯಿ, ಸಹೋದರ ಶಿವಕುಮಾರ್ ಹಾಗೂ ಬಂಧುಗಳನ್ನು ಅಗಲಿದ್ದಾರೆ.