ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ಕೃಷಿ ಇಲಾಖೆ ಸುಳ್ಯ ಇದರ ವತಿಯಿಂದ ಜಲಾನಯನ ಅಭಿವೃದ್ಧಿ ಮೂಲಕ ಬರಗಾಲ ತಡೆಗಟ್ಟುವಿಕೆ ಯೋಜನೆಯಡಿ ಅರಿವು ಮೂಡಿಸುವ ಕಾರ್ಯಕ್ರಮವು ಜಾಲ್ಸೂರು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜ.19ರಂದು ನಡೆಯಿತು.
ಈ ಕಾರ್ಯಕ್ರಮದಲ್ಲಿ ಸಹಾಯಕ ಕೃಷಿ ಅಧಿಕಾರಿ ಮೋಹನ ನಂಗಾರು ಅವರು ಕೃಷಿಕ ಗ್ರಾಮಸ್ಥರಿಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ಆಡಳಿತಾಧಿಕಾರಿ ಶ್ರೀಮತಿ ವೀಣಾ ಎಂ.ಟಿ., ಪಂ.ಅ.ಅಧಿಕಾರಿ ಸುಬ್ಬಯ್ಯ, ನೂತನ ಸದಸ್ಯರುಗಳು, ಗ್ರಾಮದ ಕೃಷಿಕರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಗ್ರಾ.ಪಂ. ಸಿಬ್ಬಂದಿಗಳು ಉಪಸ್ಥಿತರಿದ್ದರು.