ಮುಹಿಯದ್ದೀನ್ ಜುಮ್ಮಾ ಮಸೀದಿ ಪೇರಡ್ಕದಲ್ಲಿ ಜಾತಿಮತ ಭೇದವಿಲ್ಲದೆ ಸರ್ವರಿಂದಲೂ ಗೌರವಿಸುತ್ತಿರುವ ಆಶಾಕೇಂದ್ರವಾದ ಪೇರಡ್ಕ ವಲಿಯುಲ್ಲಾಹಿ ದರ್ಗಾ ಶರೀಫ್ ಉರೂಸ್ ಕಾರ್ಯಕ್ರಮ ಹಾಗೂ ಸರ್ವಧರ್ಮ ಸಮ್ಮೇಳನ ಮಾರ್ಚ್ 7 ರಂದು ಪೇರಡ್ಕ ತೆಕ್ಕಿಲ್ ಮಹಮ್ಮದ್ ಹಾಜಿ ವೇದಿಕೆಯಲ್ಲಿ ನಡೆಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ.ಎಮ್.ಶಹೀದ್ ತೆಕ್ಕಿಲ್ ವಹಿಸಿದರು.ಪೇರಡ್ಕ ಜುಮ್ಮಾ ಮಸೀದಿ ಖತೀಬರಾದ ಬಹು ಸುಹೇಲ್ ದಾರಿಮಿ ದುವಾ ನೆರವೇರಿಸಿದರು.ಕೆ.ವಿ.ಜಿ ಆಯುರ್ವೇದಿಕ್ ಕಾಲೇಜು ಅಡಳಿತಾಧಿಕಾರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಸಂಪಾಜೆ ಗ್ರಾಮವು ಸೌಹಾರ್ದತೆಗೆ ಹೆಸರುವಾಸಿಯಾಗಿದ್ದು ಪ್ರತಿವರ್ಷ ಪೇರಡ್ಕ ಮಹಾನ್ ವ್ಯಕ್ತಿಗಳ ಸನ್ನಿಧಿಗೆ ಆಗಮಿಸುವ ಸರ್ವ ಜನಾಂಗದವರನ್ನು ಗೌರವಿಸಿ ಬರಮಾಡಿಕೊಳ್ಳುತ್ತಿರುವುದು ಸಂತೋಷವಾಗಿದೆ.ನನ್ನ ಮಗಳ ನೆನಪಿಗಾಗಿ ಸಂಪಾಜೆ ಗ್ರಾಮ ಪಂಚಾಯತ್ ಗೆ ರಕ್ಷಾ ಕವಚವನ್ನು ಕೊಡುಗೆಯಾಗಿ ನೀಡುತ್ತೇನೆ ಎಂದು ಘೋಷಿಸಿದರು.ಮುಂದಿನ ವರ್ಷ ಆದಿಚುಂಚನಗಿರಿ ಮಠದ ಸ್ವಾಮೀಜಿಯವರನ್ನು ಕರೆಸಿ ಸರ್ವಧರ್ಮ ಸಮ್ಮೇಳನ ಮಾಡಬೇಕು ಎಂದು ಹೇಳಿದರು.
ಸಿಐಟಿಯು ಸುಳ್ಯ ತಾಲ್ಲೂಕು ಅಧ್ಯಕ್ಷ ಕೆ.ಪಿ.ಜಾನಿ ಮಾತನಾಡಿ
ನಾವೆಲ್ಲರೂ ಒಂದೇ ತಂದೆ ತಾಯಿಯ ಮಕ್ಕಳು ಭಾರತ ದೇಶ ವಿವಿಧ ಜಾತಿ ಭಾಷೆಗಳನ್ನು ಒಳಗೊಂಡ ನಾಡು ಇತಿಹಾಸವನ್ನು ತಿಳಿದು ಬದುಕಿದರೇ ನಮ್ಮಲ್ಲಿ ಸೌಹಾರ್ದತೆಯನ್ನು ನೆಲೆಸಲು ಸಾಧ್ಯ ಎಂದರು.ಸಮಾರಂಭದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾದ ಜಿ.ಕೆ ಹಮೀದ್ ಮತ್ತು ಪೊಲೀಸ್ ಉಪನಿರೀಕ್ಷಕ ಅಜ್ಮಲ್ ಇಬ್ರಾಹಿಂ ರವರನ್ನು ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಆತಿಥಿಗಳಾಗಿ ಜ।ಅಬ್ದುಲ್ಲಾ ಕುಂಞ ಸಂಕೇಶ್,ಝಾಕರಿಯಾ ದಾರಿಮಿ, ಪೇರಡ್ಕ ಮಸೀದಿ ಅಧ್ಯಕ್ಷ ಅಲಿ ಹಾಜಿ,ದ.ಕ.ಜಿಲ್ಲಾ ಎಸ್ ಡಿಪಿಐ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ,ಸಂಪಾಜೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸೋಮಶೇಖರ ಕೈೂಂಗಾಜೆ, ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಸುಧಾಕರ ರೈ ನೆಟ್ ಕಾಂ,ಟಿ.ಎಮ್.ಬಾಬ ಹಾಜಿ ತೆಕ್ಕಿಲ್,ಪೋಲಿಸ್ ಉಪನಿರೀಕ್ಷಕ ಅಜ್ಮಲ್ ಇಬ್ರಾಹಿಂ ಸಂಪಾಜೆ, ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಿ.ಕೆ.ಹಮೀದ್,ಸಂಪಾಜೆ ವರ್ತಕರ ಸಂಘದ ಅಧ್ಯಕ್ಷ ಯು.ಬಿ.ಚಕ್ರಪಾಣಿ,ಕೊಡಗು ಸಾಮಾಜಿಕ ಜಾಲತಾಣ ಮುಖ್ಯಸ್ಥ ಸೂರಜ್ ಹೊಸೂರು,ಸುಳ್ಯ ಪತ್ರಕರ್ತರ ಸಂಘದ ಅಧ್ಯಕ್ಷ ಕೃಷ್ಣ ಬೆಟ್ಟ, ಅಬ್ದುಲ್ ಕಲಾಂ ಸುಳ್ಯ ,ಲತೀಫ್ ಹರ್ಲಡ್ಕ,ಹನೀಫ್ ಎಸ್.ಕೆ.ಜಗದೀಶ್ ಪೆರಂಗೋಡಿ,ರಝಾಕ್ ಮೊಟ್ಟಂಗಾರ್,ಬದ್ರುದ್ದೀನ್ ಪಠೇಲ್, ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು .ಕಾದರ್ ಮೊಟ್ಟಂಗಾರ್ ಸ್ವಾಗತಿಸಿ ಅಶ್ರಫ್ ಟರ್ಲಿ ಕಾರ್ಯಕ್ರಮ ನಿರೂಪಿಸಿದರು.