ಪೆರುವಾಜೆ ಗ್ರಾಮ ಪಂಚಾಯತ್ ಮತ್ತು ಡಾ.ಕೆ.ಶಿ.ಕಾರಂತ ಸ.ಪ್ರ.ದರ್ಜೆ ಕಾಲೇಜು ಬೆಳ್ಳಾರೆ ಇದರ ಎನ್. ಎಸ್ ಎಸ್ , ರೋವರ್ ರೇಂಜರ್ಸ್ , ರೆಡ್ ಕ್ರಾಸ್ ಘಟಕಗಳ ವಿದ್ಯಾರ್ಥಿಗಳು ಹಾಗೂ ತ್ರಿವೇಣಿ ಚಾರಿಟೇಬಲ್ ಟ್ರಸ್ಟ್ ಪೆರುವಾಜೆ ಇದರ ವತಿಯಿಂದ ಪೆರುವಾಜೆ ಯಲ್ಲಿ ಕೊವಿಡ್ ಅರಿವು ಮೂಡಿಸುವ ಜಾಥಾ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಅಲೆಕ್ಕಾಡಿ, ಪಂಚಾಯತ್ ಸದಸ್ಯ ಸಚಿನ್ ರಾಜ್ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕ ವೃಂದ, ಮತ್ತಿತರರು ಉಪಸ್ಥಿತರಿದ್ದರು.