ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು 2019-20 ನೇ ಸಾಲಿನಲ್ಲಿ ನಡೆಸಿದ ಇಂಜಿನಿಯರಿಂಗ್ ಪರೀಕ್ಷೆಯ ಆಟೋಮೊಬೈಲ್ ವಿಭಾಗದಲ್ಲಿ ಬೆಂಗಳೂರಿನ ಆಚಾರ್ಯ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಯ ವಿದ್ಯಾರ್ಥಿ ಸುಳ್ಯದ ಉಜ್ವಲ್ ಹನಿಯಡ್ಕರಿಗೆ ರಿಗೆ ಚಿನ್ನದ ಪದಕದೊಂದಿಗೆ ರಾಜ್ಯದಲ್ಲಿ ಪ್ರಥಮ ರ್ಯಾಂಕ್ ಲಭಿಸಿದೆ.
ಉಜ್ವಲ್ ರವರು ಪ್ರಸ್ತುತ ಮೈಸೂರಿನ ಇನ್ಫೋಸಿಸ್ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ಇವರು ಅಜ್ಜಾವರ ಗ್ರಾಮದ ಕಾಂತಮಂಗಲ – ಹನಿಯಡ್ಕದ ನಿವಾಸಿ ಇನ್ಶುರೆನ್ಸ್ ಸರ್ವೆಯರ್ ಆಗಿರುವ ಚಿದಾನಂದ ಹನಿಯಡ್ಕ ಹಾಗೂ ಸುಳ್ಯ ಗಾಂಧಿನಗರ ಶಾಲಾ ಶಿಕ್ಷಕಿ ರಾಜೇಶ್ವರಿಯವರ ಪುತ್ರ.