ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲಾ ರಕ್ತ ನಿಧಿ ಕೇಂದ್ರಗಳಲ್ಲಿ ರಕ್ತದ ಕೊರತೆ ಕಾಣುತ್ತಿದ್ದು, ರಕ್ತದಾನ ಶಿಬಿರ ನಡೆಸಲು ಹಲವು ಕಡೆಗಳಲ್ಲಿ ಒತ್ತಡಗಳು ಬರುತ್ತಿದು, ಅದನ್ನು ಮನಗಂಡು ಸಂಪಾಜೆ ಗ್ರಾಮ ಪಂಚಾಯತ್ ಕಲ್ಲುಗುಂಡಿ ಇದರ ವತಿಯಿಂದ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ , ಲೇಡಿಗೋಶನ್ ಆಸ್ಪತ್ರೆ ಮಂಗಳೂರು ಇದರ ಸಹಭಾಗಿತ್ವದಲ್ಲಿ ಅಕ್ಷಯ ಚಾರಿಟೇಬಲ್ ಟ್ರಸ್ಟ್ ದ.ಕ. ಇದರ 2 ನೇ ರಕ್ತದಾನ ಶಿಬಿರ ಎ.11 ರಂದು ಸಂಪಾಜೆ- ಕಲ್ಲುಗುಂಡಿ ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ಅಧ್ಯಕ್ಷರಾದ ಜಿ.ಕೆ . ಹಮೀದ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ರಾಜಕೀಯ,ಸಾಮಾಜಿಕ ನಾಯಕರು ಭಾಗವಹಿಸಲಿದ್ದಾರೆ. ಆದುದರಿಂದ ಇದೊಂದು ತುರ್ತು ರಕ್ತದಾನ ಶಿಬಿರ ಎಂದು ಮನಗಂಡು ಎಲ್ಲಾ ಸಾರ್ವಜನಿಕರು ಈ ರಕ್ತದಾನ ಶಿಬಿರದಲ್ಲಿ ಪಾಲ್ಗೊಳ್ಳಬೇಕಾಗಿ ಅಕ್ಷಯ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ವಿನಂತಿಸಿಕೊಂಡಿದ್ದಾರೆ.