೨೦೨೦-೨೧ ನೇ ಸಾಲಿನಲ್ಲಿ ನಡೆದ ಮಂಗಳೂರು ವಿ.ವಿ. ಮಟ್ಟದ ಪದವಿ ಪರೀಕ್ಷೆಯ ರ್ಯಾಂಕ್ ಪಟ್ಟಿ ಪ್ರಕಟಗೊಂಡಿದ್ದು ಬಿಎಸ್ಸಿ (ಪಿಸಿಎಂ) ಯಲ್ಲಿ ಸುಳ್ಯ ನೆಹರೂ ಮೆಮೋರಿಯಲ್ ಪದವಿ ಕಾಲೇಜಿನ ವಿದ್ಯಾರ್ಥಿನಿ ಆಶ್ರಿತ 8 ನೇ ರ್ಯಾಂಕ್ ಪಡೆದುಕೊಂಡಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ರುದ್ರಕುಮಾರ್ ಎಂ.ಎಂ. ತಿಳಿಸಿದ್ದಾರೆ.
ಇವರು ನೆಲ್ಲೂರು ಕೆಮ್ರಾಜೆ ಗ್ರಾಮದ ಬೊಳ್ಳಾಜೆಯ ಕೀಲಾರ್ಕಜೆ ಮಹಾಲಿಂಗೇಶ್ವರ ಭಟ್ ರವರ ಪುತ್ರಿ.