ಐವರ್ನಾಡು ಗ್ರಾಮದ ಹಸಿರುತೋಟ ಉದಯ ಕುಮಾರ್ ರವರು ಎ.22 ರಂದು ನಿಧನರಾದರು.
ಅವರಿಗೆ 51 ವರ್ಷ ಪ್ರಾಯವಾಗಿತ್ತು.
ಮೃತರು ತಾಯಿ, ಪತ್ನಿ, ಇಬ್ಬರು ಪುತ್ರರು ಹಾಗೂ ಕುಟುಂಬಸ್ಥರು,ಬಂಧುಮಿತ್ರರನ್ನು ಅಗಲಿದ್ದಾರೆ.
ಅಸೌಖ್ಯಕ್ಕೊಳಗಾಗಿದ್ದ ಇವರನ್ನು ಕೆಲವು ದಿನಗಳ ಹಿಂದೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.ಆದರೆ ಬಹು ಅಂಗಾಂಗ ವೈಫಲ್ಯದಿಂದ ಇದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.