ಎ.23 ರಿಂದ 25 ತನಕ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ನೇಮೋತ್ಸವ
ಶ್ರೀ ಉಳ್ಳಾಕುಲು ಉಳ್ಳಾಲ್ತಿ ಮಹಿಷಂತಾಯ ಹಾಗೂ ಪರಿವಾರ ದೈವಗಳ ದೈವಸ್ಥಾನ ಅಳ್ಪೆ-ಚಿಂಗಾಣಿಗುಡ್ಡೆ ಪಂಜ ಇದರ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ನೇಮೋತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಎ. 23 ರಿಂದ ಎ.25 ತನಕ ಜರಗಲಿರುವುದು. ಎ.22 ರಂದು ವಿವಿಧ ಕಡೆ ಸಂಗ್ರಹ ಗೊಂಡ ಹಸಿರು ಕಾಣಿಕೆಯನ್ನು ವಾಹನಗಳಲ್ಲಿ ಮೆರವಣಿಗೆ ಮೂಲಕ ತಂದು ಪ್ರಾರ್ಥನೆ ಸಲ್ಲಿಸಿ ದೈವಸ್ಥಾನಕ್ಕೆ ಸಮರ್ಪಿಸಲಾಯಿತು. ಆಡಳಿತ ಮಂಡಳಿಯವರು, ಜೀರ್ಣೋದ್ಧಾರ ಸಮಿತಿಯವರು, ಬ್ರಹ್ಮಕಲಶೋತ್ಸವ ಸಮಿತಿಯವರು, ವಿವಿಧ ಸಮಿತಿಗಳ ಸಂಚಾಲಕರು, ಸದಸ್ಯರು ಉಪಸ್ಥಿತರಿದ್ದರು.
ಎ. 23ರಂದು ಸಂಜೆ 7.00ಕ್ಕೆ ದೇವತಾ ಪ್ರಾರ್ಥನೆ ಆಚಾರ್ಯ ವರಣ ,ಸ್ವಸ್ತಿ ಪುಣ್ಯಾಹವಾಚನ , ಸ್ಥಳಶುದ್ಧಿ ,ಪ್ರಾಸಾದ ಶುದ್ಧಿ, ಮಹಾಸುದರ್ಶನ ಹೋಮ, ಆವಾಹನೆ , ಉಚ್ಛಾಟನೆ, ರಾಕ್ಷೋಘ್ನ ಹೋಮ , ವಾಸ್ತು ಹೋಮ, ವಾಸ್ತು ಪೂಜಾ ಬಲಿ, ನೂತನ ಬಿಂಬಗಳ ಜಲಾಧಿವಾಸ, ಪ್ರಕಾರ ಬಲಿ, ಪ್ರಸಾದ ವಿತರಣೆ , ಅನ್ನಸಂತರ್ಪಣೆ.
ಎ. 24ರಂದು ಬೆಳಿಗ್ಗೆ ಗಂಟೆ 6 ಕ್ಕೆ ಮಹಾಗಣಪತಿ ಹೋಮ, ಬ್ರಹ್ಮಕಲಶ ಪೂಜೆ, ಪೂ.ಗಂಟೆ 9:32 ನಂತರ ಮಿಥುನ ಲಗ್ನದ ಶುಭಮುಹೂರ್ತದಲ್ಲಿ ಶ್ರೀ ಉಳ್ಳಾಕುಲು ಉಳ್ಳಾಲ್ತಿ, ರುದ್ರಚಾಮುಂಡಿ ಪಂಜುರ್ಲಿ ಹಾಗೂ ಪರಿವಾರ ದೈವ ಗಳ ಪುನಃ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ ತಂಬಿಲ ಸೇವೆ, ಮಂಗಳಾರತಿ , ನೈಮಿತ್ತಿಕ ನಿಯಮಗಳ ಪ್ರಾರ್ಥನೆ, ಪ್ರಸಾದ ವಿತರಣೆ , ಅನ್ನಸಂತರ್ಪಣೆ ನಡೆಯಲಿದೆ.
ಸಂಜೆ ಗಂಟೆ 4 ರಿಂದ
ಸಭಾ ಕಾರ್ಯಕ್ರಮ ಜರುಗಲಿದೆ.
ಶ್ರೀಕ್ಷೇತ್ರ ಒಡಿಯೂರಿನ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ
ಸಭಾಧ್ಯಕ್ಷತೆಯನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ ವಹಿಸಲಿದ್ದಾರೆ. .ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರಕಾರ ಮಾನ್ಯ ಉಸ್ತುವಾರಿ ಮತ್ತು ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್ ಅಂಗಾರ, ಪಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ದೇರಾಜೆ, ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ರೈ ಅಗೋಳಿ ಬೈಲುಗುತ್ತು, ಉಪಸ್ಥಿತರಿರುವರು. ಅದೇ ಸಂಜೆ ಗಂಟೆ 6.45ರಿಂದ ಬಂಡಾರ ತೆಗೆಯುವುದು, ರಾತ್ರಿ ಗಂಟೆ 9 ಕ್ಕೆ ಶ್ರೀ ದೈವಂಕುಲು ಮಹಿಷಂತಾಯ, ಮಣಿಪಾನ, ಪಂಜುರ್ಲಿ ಮತ್ತು ಉಳ್ಳಾಲ್ತಿ ಅಮ್ಮನವರ ನೇಮೋತ್ಸವ ಜರುಗಲಿದೆ. ಎ. 25 ರಂದು ಬೆಳಿಗ್ಗೆ ಗಂಟೆ 9 ಕ್ಕೆ ಶ್ರೀ ಉಳ್ಳಾಕುಲು ಮತ್ತು ವರ್ಣಾರ ಪಂಜುರ್ಲಿ ಮತ್ತು ಗುಳಿಗ ದೈವಗಳ ನೇಮೋತ್ಸವ, ರಾತ್ರಿ ಗಂಟೆ 9ರಿಂದ ಶ್ರೀ ರುದ್ರಚಾಮುಂಡಿ ಮತ್ತು ಪರಿವಾರ ದೈವಗಳ ನೇಮೋತ್ಸವ ಜರುಗಲಿರುವುದು.