ಶ್ರೀ ಮಂಜುನಾಥೇಶ್ವರ ಜಾನಪದ ಕಲಾಸಂಘ ಬಾಳಿಲ-ಮುಪ್ಪೇರ್ಯ ಇದರ ಆಶ್ರಯದಲ್ಲಿ ಊರವರ ಹಾಗೂ ಪರವೂರವರ ಸಹಕಾರದೊಂದಿಗೆ ಸಸಿಹಿತ್ಲು ಶ್ರೀ ಭಗವತೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಮಂಗಳೂರು ಇವರಿಂದ ಕಾಂತು ಬಾಳಿಲ ವಿರಚಿತ ಯಕ್ಷಗಾನ ಬಯಲಾಟ ಅಜಪಿಲ ಕ್ಷೇತ್ರ ಮಹಾತ್ಮೆ – ಬುಲೇರಿದ ತುಡರ್ ಏ. 22ರಂದು ಬೆಳ್ಳಾರೆಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ನಡೆಯಿತು. ಬೆಳಿಗ್ಗೆ ಪೂಜೆ, ಮಧ್ಯಾಹ್ನ ಅನ್ನಸಂತರ್ಪಣೆ, ಅಪರಾಹ್ನ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ಜರಗಿತು.
ಸಂಜೆ ಆರ್.ಕೆ. ಭಟ್ ಕುರುಂಬುಡೇಲುರವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಸಚಿವ ಎಸ್.ಅಂಗಾರ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಪಿ.ಜಿ.ಎಸ್.ಎನ್. ಪ್ರಸಾದ್, ಬೆಳ್ಳಾರೆ ಗ್ರಾ.ಪಂ. ಅಧ್ಯಕ್ಷ ಚಂದ್ರಶೇಖರ ಪನ್ನೆ, ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಸುನಿಲ್ ರೈ ಪುಡ್ಕಜೆ, ಸಾಮಾಜಿಕ ಕಾರ್ಯಕರ್ತ ಯತೀಶ್ ಆರ್ವಾರ, ಬೆಳ್ಳಾರೆ ಜೇಸಿಐ ಅಧ್ಯಕ್ಷೆ ಶ್ರೀಮತಿ ನಿರ್ಮಲಾ ಜಯರಾಮ್, ಅತಿಥಿಗಳಾಗಿ ಭಾಗವಹಿಸಿದ್ದರು. ಸಚಿವ ಎಸ್. ಅಂಗಾರ ಮತ್ತು ಬೆಳ್ಳಾರೆ ಪೊಲೀಸ್ ಠಾಣೆಯಿಂದ ಕಡಬ ಠಾಣೆಗೆ ವರ್ಗಾವಣೆಗೊಂಡ ಆಂಜನೇಯ ರೆಡ್ಡಿಯವರಿಗೆ ಗೌರವಾರ್ಪಣೆ ನಡೆಯಿತು. ಶ್ರೀ ಮಂಜುನಾಥೇಶ್ವರ ಕಲಾ ಸಂಘದ ಅಧ್ಯಕ್ಷ ಕಾಂತು ಬಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕು. ಹೇಮಲತಾ ಮತ್ತು ಕು. ಜಯಲಕ್ಷ್ಮಿ ಪ್ರಾರ್ಥಿಸಿದರು. ರಾಜೇಶ್ ಸುವರ್ಣ ಅಯ್ಯನಕಟ್ಟೆ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಈಶ್ವರ ವಾರಣಾಶಿ ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ಯಕ್ಷಗಾನ ಬಯಲಾಟ ನಡೆಯಿತು.