ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ ಅವರಿಗೆ ವರ್ಗಾವಣೆಗೆ ಆದೇಶವಾಗಿದೆ.
ಇನ್ನು ಮುಂದೆ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಪುತ್ತೂರಿನ ಸಹಾಯಕ ಆಯುಕ್ತ ಗಿರೀಶ್ ನಂದನ್ ಕಾರ್ಯ ನಿರ್ವಹಿಸುವಂತೆ ಆದೇಶವಾಗಿದೆ ಎಂದು ತಿಳಿದು ಬಂದಿದೆ. ಡಾ. ನಿಂಗಯ್ಯ ಅವರು ಬೆಳಗಾವಿ ಸವದತ್ತಿಯ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಯಾಗಿ ಮುಂದುವರಿಯಲಿದ್ದಾರೆ.