ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವವು ಎ.26 ರಂದು ನಡೆಯಿತು.
ಬೆಳಿಗ್ಗೆ ಗಂಟೆ 7.00 ರಿಂದ 108 ತೆಂಗಿನಕಾಯಿ ಗಣಪತಿ ಹೋಮ, ಮಧ್ಯಾಹ್ನ ನವಕ, ಪವಮಾನಾಭಿಷೇಕ, ಮಹಾಪೂಜೆ,ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ,ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಮತ್ತು ಸಮಿತಿ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
ರಾತ್ರಿ ರಂಗಪೂಜೆ ,ಪ್ರಸಾದ ವಿತರಣೆ ನಡೆಯಲಿದೆ.