ದೇಶದ 75ನೇ ಸ್ವಾತಂತ್ರ್ಯೋತ್ಸವ ದ ಅಮೃತಮಹೋತ್ಸವದ ಅಂಗವಾಗಿ ಕಿಸಾನ್ ಕಾರ್ಡ್ “ವಿಶೇಷ ಅಭಿಯಾನ ಕಾರ್ಯಕ್ರಮವು ಕನಕಮಜಲು ಗ್ರಾ.ಪಂ. ಸಭಾಭವನದಲ್ಲಿ ಎ.30ರಂದು ನಡೆಯಿತು. ಸಹಾಯಕ ತೋಟಗಾರಿಕಾ ನಿರ್ದೇಶಕ ಅರಬಣ್ಣ ಪುಜೇರಿ ಅವರು ಕಿಸಾನ್ ಕ್ರೆಡಿಟ್ ಕಾರ್ಡ್ ನ ಬಗ್ಗೆ ಮಾಹಿತಿಯನ್ನು ನೀಡಿದರು.
ಗ್ರಾ.ಪಂ. ಅಧ್ಯಕ್ಷ ಶ್ರೀಧರ ಕುತ್ಯಾಳ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಗ್ರಾ. ಪಂ. ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸರೋಜಿನಿ ಸೇರಿದಂತೆ ಗ್ರಾ.ಪಂ. ಉಪಾಧ್ಯಕ್ಷರು, ಸದಸ್ಯರುಗಳು ಹಾಗು ಗ್ರಾಮಸ್ಥರು ಉಪಸ್ಥಿತರಿದ್ದರು.