ಸಹಕಾರ ಸಂಘಗಳ ಪುತ್ತೂರು ವಿಭಾಗದ ನೂತನ ಸಹಾಯಕ ನಿಬಂಧಕರಾದ ಶ್ರೀಮತಿ ತ್ರಿವೇಣಿ ಯವರು ಸುಳ್ಯ ಶ್ರೀ ವೆಂಕಟರಮಣ ಕೋ ಆಪರೇಟಿವ್ ಸೊಸೈಟಿ ಗೆ ಮೇ.18 ರಂದು ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಸಹಾಯಕ ನಿಬಂಧಕರನ್ನು ಸಂಸ್ಥೆಯ ಅಧ್ಯಕ್ಷ ರಾದ ಪಿ.ಸಿ. ಜಯರಾಮರು ಗೌರವಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ. ವಿಶ್ವನಾಥ್, ಜನರಲ್ ಮ್ಯಾನೇಜರ್ ಚಂದ್ರಶೇಖರ ಎಂ, ಸುಳ್ಯ ಶಾಖಾ ವ್ಯವಸ್ಥಾಪಕ ಲೋಹಿತ್ ಕೆ, ಸಿಬ್ಬಂದಿಗಳಾದ ಸುರೇಶ ಎಂ, ಕಾರ್ತಿಕ್ ಇದ್ದರು.