ಸುಳ್ಯ ವಕೀಲರ ಸಂಘದ ಪದಾಧಿಕಾರಿಗಳು ಬೆಂಗಳೂರು ಭೇಟಿ
ಸುಳ್ಯ ನ್ಯಾಯಾಲಯಕ್ಕೆ ಹೊಸ ಕಟ್ಟಡ ರಚನೆಗೆ ಅನುದಾನ ಮಂಜೂರು ಪ್ರಕ್ರಿಯೆ ಪ್ರಗತಿಯಲ್ಲಿದ್ದು ಈ ಕುರಿತು ಸುಳ್ಯ ವಕೀಲರ ಸಂಘದ ಅಧ್ಯಕ್ಷ ನಾರಾಯಣ ಕೆ ಯವರ ನೇತೃತ್ವದಲ್ಲಿ ಸುಳ್ಯ ವಕೀಲರ ಸಂಘದ ಪದಾಧಿಕಾರಿಗಳು ಇತ್ತೀಚೆಗೆ ಬೆಂಗಳೂರಿಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಟಿ.ಜಿ. ಶಿವಶಂಕರೇಗೌಡರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಹೆಚ್ಚುವರಿ ಹೈಕೋರ್ಟ್ ಜನರಲ್ ಅರುಣ್ ಶ್ಯಾಮ್ ಇದ್ದರು.
ಈ ಸಂದರ್ಭದಲ್ಲಿ ಸುಳ್ಯ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ವಿನಯಕುಮಾರ್ ಮುಳುಗಾಡು, ಕೋಶಾಧಿಕಾರಿ ಜಗದೀಶ್ ಡಿ.ಪಿ., ಹರ್ಷಿತ್ ಕಾರ್ಜ, ಸಂದೀಪ್ ವಳಲಂಬೆ ಇದ್ದರು.