ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ

0

 

ಬೆಂಗಳೂರಿನ ಇಬ್ಬರು ಸಹಿತ 40 ಮಂದಿ ಪೊಲೀಸ್ ವಶಕ್ಕೆ

ಮಂಗಳೂರಿನಲ್ಲಿ ಡಿಜಿಪಿ ಪ್ರವೀಣ್ ಸೂದ್ ಹೇಳಿಕೆ

ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಇಬ್ಬರು ಸೇರಿದಂತೆ ಒಟ್ಟು 40 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ನಾಗರಿಕರು ಸಹ ಪೊಲೀಸರಿಗೆ ಅಗತ್ಯ ಸಹಕಾರ ನೀಡಬೇಕು ಎಂದು ಡಿಜಿಪಿ ಪ್ರವೀಣ್ ಸೂದ್ ಹೇಳಿದ್ದಾರೆ.

ಮಂಗಳೂರಿಗೆ ಭೇಟಿ ನೀಡಿ, ಸರ್ಕ್ಯೂಟ್ ಹೌಸ್‌ನಲ್ಲಿ ಅಧಿಕಾರಿಗಳ ಜೊತೆ ತನಿಖಾ ಪ್ರಗತಿ ಕುರಿತು ಸಭೆ ನಡೆಸಿದ ಅವರು, ಅಗತ್ಯ ಮಾಹಿತಿ ಪಡೆದುಕೊಂಡರು. ಪಶ್ಚಿಮ ವಲಯ ಐಜಿಪಿ ಅರುಣ್ ಚಕ್ರವರ್ತಿ, ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್, ಎಸ್ಪಿ ಋಷಿಕೇಶ್ ಸೋನಾವಣೆ ಸೇರಿದಂತೆ ಹಿರಿಯ ಅಧಿಕಾರಿಗಳು ಪ್ರವೀಣ್ ಸೂದ್ ಅವರಿಗೆ ವರದಿ ನೀಡಿದರು.

ಸರಣಿ ಕೊಲೆಗಳ ತನಿಖೆಯು ಉತ್ತಮ ರೀತಿಯಲ್ಲಿ ನಡೆಯುತ್ತಿದೆ. ಮಸೂದ್ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳ ಪೈಕಿ ಪ್ರಮುಖರು ಸಿಕ್ಕಿದ್ದಾರೆ. ಉಳಿದವರನನ್ನು ಶೀಘ್ರ ಬಂಧಿಸುತ್ತೇವೆ. ಫಾಜಿಲ್ ಹತ್ಯೆಗೆ ಬಳಸಿದ ಕಾರನ್ನು ವಶಕ್ಕೆ ಪಡೆದಿದ್ದೇವೆ. ಪ್ರಕರಣ ಸಂಬಂಧ ಓರ್ವ ಆರೋಪಿಯನ್ನೂ ಬಂಧಿಸಲಾಗಿದೆ. ಸಾರ್ವಜನಿಕರು ಸಹಕರಿಸಿದರೆ ಮಾತ್ರ ಈ ಪ್ರಕರಣವನ್ನು ಶೀಘ್ರ ಭೇದಿಸಬಹುದು. ಗಡಿಭಾಗದಲ್ಲಿ ಚೆಕ್ ಪೋಸ್ಟ್ಗಳನ್ನು ಬಿಗಿಗೊಳಿಸಲಾಗುತ್ತದೆ ಎಂದು ಹೇಳಿದರು.

ಪ್ರವೀಣ ನೆಟ್ಟಾರ್ ಹತ್ಯೆಗೆ ಕಾರಣವಾದ ಅಂಶಗಳು, ತನಿಖೆಯ ಪ್ರಗತಿ, ಫಾಝಿಲ್ ಹತ್ಯೆಯ ತನಿಖೆಯ ಪ್ರಗತಿ ಬಗ್ಗೆ ಮಾಹಿತಿ ಡಿಜಿಪಿ ಮಾಹಿತಿ ಪಡೆದರು. ಇದೇ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡಲು ತೆಗೆದುಕೊಳ್ಳಬೇಕಾದ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ ಕುರಿತು ವಿಸೃತ ಚರ್ಚೆ ನಡೆಯಿತು.

ಕಾನೂನು ಸುವ್ಯವಸ್ಥೆ ಪರಿಸ್ಥಿತಿಯ ಪರಿಶೀಲನೆಗೆಂದು ನಾನು ಬಂದಿದ್ದೇನೆ. ಈಗ ನಡೆದಿರುವ ಕೊಲೆಗಳ ತನಿಖೆ ಉತ್ತಮ ರೀತಿಯಲ್ಲಿ ನಡೆಯುತ್ತಿದೆ. ಮಸೂದ್ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ. ಹತ್ಯೆ ಆರೋಪಿಗಳಲ್ಲಿ ಪ್ರಮುಖರು ಸಿಕ್ಕಿಬಿದ್ದಿದ್ದಾರೆ. ಉಳಿದವರನ್ನು ಶೀಘ್ರದಲ್ಲೇ ಬಂಧಿಸುತ್ತೇವೆ. ನಮಗೆ ಎನ್‌ಐಎ ಮೊದಲಾದ ಏಜೆನ್ಸಿಗಳು ಸಹಕರಿಸುತ್ತಿವೆ. ಫಾಸಿಲ್ ಹತ್ಯೆಗೆ ಬಳಸಲಾದ ಕಾರು ವಶಪಡಿಸಿಕೊಂಡಿದ್ದು, ಓರ್ವ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದೇವೆ ಎಂದರು.

ಈ ಕೊಲೆಗಳ ಮಧ್ಯೆ ಏನಾದರೂ ಸಂಬಂಧವಿದೆಯೇ ಅಥವಾ ಇಲ್ಲವೇ ಎನ್ನುವ ಬಗ್ಗೆ ಈ ಹಂತದಲ್ಲಿ ಏನೂ ಹೇಳಲು ಸಾಧ್ಯವಿಲ್ಲ. ಶವಗಳಿಗೆ ಯಾವುದೇ ಜಾತಿ ಇರುವುದಿಲ್ಲ.ಎಲ್ಲಾ ಸಾವುಗಳು ನಮಗೆ ಒಂದೇ. ಈ ರೀತಿಯ ಘಟನೆಗಳು ನಡೆದಾಗ ಪಬ್ಲಿಕ್ ಇಂಟೆಲಿಜೆನ್ಸ್ ನಮಗೆ ಸಹಕರಿಸಬೇಕು. ಘಟನೆಯನ್ನು ನೋಡಿದವರು ಆರೋಪಿಗಳ ಪರಿಚಯ ಇರುವವರು ಇಲಾಖೆಗೆ ಸಹಕರಿಸಬೇಕು. ಕೇರಳ ಗಡಿಭಾಗದಲ್ಲಿ ಚೆಕ್ ಪೋಸ್ಟ್‌ಗಳನ್ನು ಬಿಗಿಗೊಳಿಸಲಾಗಿದೆ ಎಂದು ತಿಳಿಸಿದರು.