ಸುಳ್ಯ – ಮಡಿಕೇರಿ ರಸ್ತೆ ಸಂಪರ್ಕ ಕಡಿತಗೊಳ್ಳುವ ಭೀತಿ
ಕೊಡಗಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಕೊಯನಾಡಿನ ಗಣಪತಿ ಗುಡಿಯ ಬಳಿಯಲ್ಲಿರುವ ಸೇತುವೆಯ ಎರಡೂ ಬದಿ ಕುಸಿತವಾಗಿದ್ದು, ಮಳೆ ನಿರಂತರವಾಗಿ ಬಂದರೆ ಸುಳ್ಯ ಮಡಿಕೇರಿ ರಸ್ತೆ ಸಂಪರ್ಕ ಕಡಿತಗೊಳ್ಳುವ ಭೀತಿ ಎದುರಾಗಿದೆ.
ಭಾರೀ ಮಳೆಯಿಂದಾಗಿ ಇದೀಗ ಸೇತುವೆಯ ಎರಡೂ ಬದಿಗಳಲ್ಲಿ ಪೊಲೀಸ್ ಬ್ಯಾರಿಕೇಡ್ ಅಳವಡಿಸಿ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಡಲಾಗಿದೆ.
ಈ ಸೇತುವೆಯಲ್ಲಿ ಭಾರೀ ಗಾತ್ರದ ಘನವಾಹನಗಳು ಸಂಚರಿಸಿದರೆ ಸೇತುವೆ ಸಂಪೂರ್ಣ ಕುಸಿಯುವ ಭೀತಿ ನಿರ್ಮಾಣವಾಗಿದೆ.