ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಇಂದು ಸಚಿವ ಸುನಿಲ್ ಕುಮಾರ್ ಭೇಟಿ

0

ಮಳೆಯಿಂದ ಹಾನಿಗೊಳಗಾದ ಸುಳ್ಯ ಮತ್ತು ಕಡಬ ತಾಲೂಕಿನ ವಿವಿಧ ಪ್ರದೇಶಕ್ಕೆ ಇಂದು ದ.ಕ. ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಬೆಳಗ್ಗೆ 10 ಗಂಟೆಗೆ ಸುಬ್ರಹ್ಮಣ್ಯಕ್ಕೆ ಆಗಮಿಸಲಿರುವ ಸಚಿವರು ಸುಬ್ರಹ್ಮಣ್ಯದ ಪರ್ವತಮುಖಿ ಮನೆ ಕುಸಿತದ ಪ್ರದೇಶಕ್ಕೆ ಭೇಟಿ ನೀಡುವರು. ಬಳಿಕ ಏನೆಕಲ್ಲು, ಹರಿಹರ ಪಲ್ಲತಡ್ಕ, ಕಲ್ಮಕಾರು ಪ್ರದೇಶಗಳಿಗೆ ಭೇಟಿ ನೀಡುವರು. ಮಧ್ಯಾಹ್ನ 1:00ಗೆ ಸುಳ್ಯಕ್ಕೆ ಆಗಮಿಸುವ ಅವರು ಸುಳ್ಯ ತಾಲೂಕು ಪಂಚಾಯಿತಿನಲ್ಲಿ ಪ್ರಗತಿ ಪರಿಶೀಲನ ಸಭೆ ನಡೆಸಲಿದ್ದಾರೆಂದು ತಿಳಿದು ಬಂದಿದೆ.