ಅರಂತೋಡು – ತೊಡಿಕಾನ ಸಹಕಾರಿ ಸಂಘಕ್ಕೆ ಸತತ 5 ನೇ ಬಾರಿ ಜಿಲ್ಲಾ ಪ್ರಶಸ್ತಿ

0

 

 

ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ 2021-22 ಸಾಲಿನ ಸಮಗ್ರ ಕಾರ್ಯಚಟುವಟಿಕೆಗೆ ಜಿಲ್ಲಾ ಬ್ಯಾಂಕ್ ಪ್ರಶಸ್ತಿಯನ್ನು ನೀಡಲಾಯಿತು. ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ. ಎನ್ ರಾಜೇಂದ್ರ ಕುಮಾರ್ ರವರಿಂದ ಇಂದು ಮಂಗಳೂರಿನ ಜಿಲ್ಲಾ ಬ್ಯಾಂಕಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ಮತ್ತು ಸ್ಮರಣಿಕೆಯನ್ನು ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಉಪಾಧ್ಯಕ್ಷ ದಯಾನಂದ ಕುರುಂಜಿ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವಾಸುದೇವ ನಾಯಕ್, ಉಪ ಕಾರ್ಯನಿರ್ವಹಣಾಧಿಕಾರಿ ಪ್ರದೀಪ್ ಕುಮಾರ್ ರವರು ಸ್ವೀಕರಿಸಿದರು.