ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ 2021-22 ಸಾಲಿನ ಸಮಗ್ರ ಕಾರ್ಯಚಟುವಟಿಕೆಗೆ ಜಿಲ್ಲಾ ಬ್ಯಾಂಕ್ ಉತ್ತಮ ಸಹಕಾರಿ ಪ್ರಶಸ್ತಿಯನ್ನು ನೀಡಲಾಯಿತು.
ಇತ್ತೀಚೆಗೆ ನಿವೃತ್ತಿ ಹೊಂದಿದ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಈಶ್ವರ ಆಳ್ವರನ್ನು ಶಾಲು ಹೊದಿಸಿ ಫಲ,ಪುಷ್ಪ ಸ್ಮರಣಿಕೆ ನೀಡಿ ಜಿಲ್ಲಾ ಬ್ಯಾಂಕಿನ ಅಧ್ಯಕ್ಷರು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಡಿ.ಸಿ.ಬ್ಯಾಂಕ್ ನಿರ್ದೇಶಕರು, ಸಹಕಾರಿ ಸಂಘದ ನಿರ್ದೇಶಕರಾದ ಕರುಣಾಕರ ಆಳ್ವ,ವಿಠಲದಾಸ್ ಎನ್.ಎಸ್.ಡಿ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.