ಸುಳ್ಯ ಅಲ್ಪಸಂಖ್ಯಾತರ ವಿವಿಧೋದ್ದೇಶ ಸಹಕಾರಿ ಸಂಘ ಕ್ಕೆ 2021- 22 ನೇ ಸಾಲಿನ ವಿಶಿಷ್ಟ ಸಾಧನಾ ಪ್ರಶಸ್ತಿ

0

 

ಸುಳ್ಯದಲ್ಲಿ ಕಳೆದ 24 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅಲ್ಪಸಂಖ್ಯಾತರ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ ಸಂಸ್ಥೆಗೆ 2021.22 ವಿಶಿಷ್ಟ ಸಾಧನಾ ಪ್ರಶಸ್ತಿ ಲಭಿಸಿದೆ.

ಪ್ರಶಸ್ತಿ ಪ್ರಧಾನ ಸಮಾರಂಭ ದ ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಇದರ ಮಂಗಳೂರಿನ ಕೊಡಿಯಾಲಬೈಲು ಪ್ರಧಾನ ಕಛೇರಿಯಲ್ಲಿ ನಡೆಯಿತು.ಆಡಳಿತ ಸಮಿತಿ ಅಧ್ಯಕ್ಷ ಡಾ. ಎಂ ಎಸ್ ರಾಜೇಂದ್ರ ಕುಮಾರ್ ಸುಳ್ಯ ಅಲ್ಪಸಂಖ್ಯಾತರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಇಕ್ಬಾಲ್ ಎಲಿಮಲೆ ಹಾಗೂ ಸಂಸ್ಥೆಯ ಕಾರ್ಯದರ್ಶಿ ಪ್ರಜ್ವಲ್ ನಾಯಕ್ ರವರನ್ನು ಸನ್ಮಾನಿಸಿ ಪ್ರಶಸ್ತಿ ಪತ್ರವನ್ನು ಹಸ್ತಾಂತರಿಸಿದರು. ಸುಳ್ಯ ಅಲ್ಪಸಂಖ್ಯಾತರ ಸೊಸೈಟಿ ತನ್ನ ವ್ಯಾಪ್ತಿಯಲ್ಲಿ ಸಾಧಿಸಿರುವ ವಿಶಿಷ್ಟ ಸಾಧನೆ ಗುರುತಿಸಿ ಈ ಪ್ರಶಸ್ತಿಗೆ ಭಜನವಾಗಿದೆ.
ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ ಇದರ ಆಡಳಿತ ಸಮಿತಿಯ ಪದಾಧಿಕಾರಿಗಳು, ಸರ್ವ ಸದಸ್ಯರು ಹಾಗೂ ಸುಳ್ಯ ಅಲ್ಪಸಂಖ್ಯಾತರ ಸಹಕಾರಿ ಸಂಘದ ಆಡಳಿತ ಸಮಿತಿ ನಿರ್ದೇಶಕರುಗಳಾದ ಆರ್ ಕೆ ಮಹಮ್ಮದ್, ಎ ಕೆ ಹಸೈನಾರ್ ಕಲ್ಲುಗುಂಡಿ ಮೊದಲಾದವರು ಉಪಸ್ಥಿತರಿದ್ದರು.