ಪಂಜ: ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಆಚರಣೆಯ ಕುರಿತು ‌ಸಭೆ

0

 

ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಪಂಜ, ಗ್ರಾಮ ಪಂಚಾಯತ್ ಪಂಜ ಹಾಗೂ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಆ. 15 ರಂದು ನಡೆಯಲಿರುವ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಆಚರಣೆಯ ಕುರಿತು ಪೂರ್ವಭಾವಿ ಸಭೆಯು ಆ.6ರಂದು ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಲ್ಲೇಗ ಪೂವಣಿ ಹೆಗ್ಡೆ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಕುಳ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಪೂರ್ಣಿಮಾ ದೇರಾಜೆ, ಹಾಗೂ ಅನೇಕ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಐಕ್ಯತಾ ನಡಿಗೆ, ಧ್ವಜಾರೋಹಣ, ಸಭಾ ಕಾರ್ಯಕ್ರಮ ಜರುಗಲಿದೆ. ವಿದ್ಯಾಧರ ಬಡಡ್ಕ ಐಕ್ಯತೆ ನುಡಿ ನೀಡಲಿದ್ದಾರೆ.ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ದೇರಾಜೆ ಸಭಾಧ್ಯಕ್ಷತೆ ವಹಿಸಲ್ಲಿದ್ದು.ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಕುಳ ಧ್ವಜಾರೋಹಣ ನೆರವೇರಿಸಲಿದ್ದಾರೆ.