ಸುಳ್ಯ: ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಇದರ ಆಡಳಿತ ಕಛೇರಿಯಲ್ಲಿ ಡಾ. ಕೆ.ವಿ.ಜಿ. ಯವರ 9ನೇ ಪುಣ್ಯಸ್ಮರಣೆ

0

 

 

ಆಧುನಿಕ ಸುಳ್ಯದ ನಿರ್ಮಾತೃ ಶಿಕ್ಷಣ ಕ್ರಾಂತಿಯ ಹರಿಕಾರ ಪೂಜ್ಯ ಡಾ. ಕುರುಂಜಿ ವೆಂಕಟ್ರಮಣ ಗೌಡರ 9ನೇ ಪುಣ್ಯ ಸ್ಮರಣೆಯ ಕಾರ್ಯಕ್ರಮವು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಆಡಳಿತ ಕಛೇರಿಯಲ್ಲಿ ನಡೆಯಿತು.


ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಸುಳ್ಯ ಇದರ ಪ್ರಧಾನ ಕಾರ್ಯದರ್ಶಿಗಳಾದ ಡಾ. ರೇಣುಕಾ ಪ್ರಸಾದ್ ಕೆ.ವಿ.ಯವರು ಪೂಜ್ಯರ ಭಾವಚಿತ್ರದ ಮುಂದೆ ದೀಪ ಬೆಳಗಿಸಿ ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕೆ.ವಿ.ಜಿ ಶಿಕ್ಷಣ ಸಂಸ್ಥೆಗಳ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಊರುಬೈಲು, ಎ.ಓ.ಎಲ್.ಇ ಕಛೇರಿಯ ಆಡಳಿತಾಧಿಕಾರಿ ಪ್ರಸನ್ನ ಕಲ್ಲಾಜೆ, ಲೆಕ್ಕಪತ್ರ ಅಧೀಕ್ಷರಾದ ಪದ್ಮನಾಭ ಕಾನಾವುಜಾಲು, ಕೆ.ವಿ.ಜಿ ಶಿಕ್ಷಣ ಸಂಸ್ಥೆಯ ಸಿಬ್ಬಂದಿಗಳಾದ ಅರುಣ್ ಕುರುಂಜಿ, ವಿನೀತ್ ಕುಮಾರ್ ಕೆ, ಗಣೇಶ್ ಅಮೆಮನೆ, ರಶೀದ್ ಉಪಸ್ಥಿತರಿದ್ದರು.