ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಸುಳ್ಯ ಎಸ್ ಡಿಪಿಐ ಕಚೇರಿಯಲ್ಲಿ ಆರೋಪಿಗಳನ್ನು ಕರೆತಂದು ಮಹಜರು

0

 

ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಇಂದು ಬೆಳಿಗ್ಗೆ ಸುಳ್ಯದ ಎಸ್.ಡಿ.ಪಿ. ಐ. ಕಚೇರಿಗೆ ಕರೆತಂದು ಪೊಲೀಸರು ಮಹಜರು ನಡೆಸಿದ್ದಾರೆ.


ಹತ್ಯೆ ಪ್ರಕರಣದಲ್ಲಿ ನಿನ್ನೆಯಷ್ಟೇ ಸುಳ್ಯ ನಾವೂರು ನಿವಾಸಿ ಆಬಿದ್,  ಬೆಳ್ಳಾರೆ ಗೌರಿಹೊಳೆ ನಿವಾಸಿ ನೌಫಾಲ್ ಎಂಬವರನ್ನು ಪೊಲೀಸರು ಬಂಧಿಸಿದ್ದರು. ಇಂದು ಬೆಳಿಗ್ಗೆ 8 ಗಂಟೆಗೆ ಡಿವೈಎಸ್ಪಿ ಗಾನ ಕುಮಾರಿ ನೇತೃತ್ವದ ಪೊಲೀಸ್ ತಂಡ ಈ ಇಬ್ಬರನ್ನು  ಸುಳ್ಯದ ಆಲೆಟ್ಟಿ ಕ್ರಾಸ್ ನಲ್ಲಿರುವ ಎಸ್.ಡಿ.ಪಿ. ಐ.  ಕಚೇರಿಗೆ ಕರೆತಂದು ಮಹಜರು ನಡೆಸಿದ್ದಾರೆ.