ಕಳಂಜ ಸಹಕಾರಿ ಸಂಘಕ್ಕೆ ದ. ಕ. ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಪ್ರೋತ್ಸಾಹಕ ಪ್ರಶಸ್ತಿ

0

 

ಕಳಂಜ ಬಾಳಿಲ ಪ್ರಾ.ಕೃ.ಪ.ಸಹಕಾರಿ ಸಂಘಕ್ಕೆ ದ. ಕ. ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ ಲಭಿಸಿದೆ.

ಆ. 5 ರಂದು ಮಂಗಳೂರಿನಲ್ಲಿ ನಡೆದ ಡಿಸಿಸಿ ಬ್ಯಾಂಕ್ ಮಹಾಸಭೆಯಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ಪ್ರಧಾನಗೈದರು. ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಂ. ಕೂಸಪ್ಪ ಗೌಡ ಮುಗುಪ್ಪು, ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಮೇಶ್ ನಾಯಕ್ ತಡಗಜೆ ಪ್ರಶಸ್ತಿ ಸ್ವೀಕರಿಸಿದರು. ಸಂಘದ ನಿರ್ದೇಶಕರುಗಳಾದ ಎನ್ ವಿಶ್ವನಾಥ್ ರೈ, ಬಿ. ಸುಭಾಶ್ಚಂದ್ರ ರೈ, ಕೆ.ಎಲ್ ಸುಬ್ರಹ್ಮಣ್ಯ, ಕರುಣಾಕರ ಶೆಟ್ಟಿ, ಭಾರತೀಶಂಕರ, ವಿಶ್ವನಾಥ ಪರವ ಉಪಸ್ಥಿತರಿದ್ದರು.