ಬೆಳ್ಳಾರೆ ಗ್ರಾಮ ಪಂಚಾಯತ್:  ಸ್ವಾತಂತ್ರ್ಯ ಅಮೃತ ಮಹೋತ್ಸವದ ಆಚರಣೆ

0

 

 

”ಹರ್ ಘರ್ ತಿರಂಗಾ ” ಕಾರ್ಯಕ್ರಮದ ಕುರಿತು ಪೂರ್ವಭಾವಿ ಸಭೆ

ಬೆಳ್ಳಾರೆ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಆಚರಣೆ ಕುರಿತು ಮತ್ತು ”ಹರ್ ಘರ್ ತಿರಂಗಾ ” ಕಾರ್ಯಕ್ರಮದ ಕುರಿತು ಪೂರ್ವಭಾವಿ ಸಭೆ ಆ. 8ರಂದು ರಾಜೀವ ಗಾಂಧಿ ಸೇವಾ ಕೇಂದ್ರದಲ್ಲಿ ನಡೆಯಿತು. ಹಾಗೂ ಮನೆಮನೆಗೆ ರಾಷ್ಟ್ರಧ್ವಜವನ್ನು ವಿತರಿಸುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರ ಶೇಖರ ಪನ್ನೆ, ಉಪಾಧ್ಯಕ್ಷೆ ಶ್ರೀಮತಿ ಗೌರಿ ನೆಟ್ಟಾರು ,ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು, ಪ್ರಮುಖರಾದ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಘ ಸಂಸ್ಥೆಗಳ ಪ್ರತಿನಿಧಿಗಳು ,ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಶಾಲಾ ಪ್ರಾಂಶುಪಾಲರು,ಶಿಕ್ಷಕರು , ಶಾಲಾ ಎಸ್ ಡಿ ಎಂ ಸಿ ಪ್ರತಿನಿಧಿಗಳು, ಪಂಚಾಯಿತಿ ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಹಾಜರಿದ್ದರು.