ಐವರ್ನಾಡು: ನಿಸರ್ಗ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

0

 

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಐವರ್ನಾಡಿನ ನಿಸರ್ಗ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮವು ಆ.9ರಂದು ಜರುಗಿತು.


ಕಾರ್ಯಕ್ರಮವನ್ನು ಐವರ್ನಾಡು ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಶ್ರೀಮತಿ ಸುಜಾತ ಪವಿತ್ರಮಜಲು ಉದ್ಘಾಟಿಸಿದರು. ಜ್ಞಾನವಿಕಾಸ ಕೇಂದ್ರದ ಅಧ್ಯಕ್ಷೆ ಶ್ರೀಮತಿ ಶೇಷಮ್ಮ ಅಧ್ಯಕ್ಷತೆ ವಹಿಸಿದ್ದರು.
ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ವೇದಾ ಹರೀಶ್ ಶೆಟ್ಟಿ ನೆಕ್ರಾಜೆ, ವಲಯ ಮೇಲ್ವಿಚಾರಕ ವಸಂತ, ತಾಲೂಕು ಸಮನ್ವಯಾಧಿಕಾರಿ ಶ್ರೀಮತಿ ಭಾರತಿ, ದೇರಾಜೆ ಸ.ಕಿ.ಪ್ರಾ.ಶಾಲಾ ಸಹಶಿಕ್ಷಕಿ ರೇಷ್ಮಾ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಬಳಿಕ ವಿವಿಧ ಮನೋರಂಜನಾ ಹಾಗೂ ಆಟೋಟ ಸ್ಪರ್ಧೆಗಳು ಜರುಗಿತು. ನಳಿನಿ ಸ್ವಾಗತಿಸಿ, ಪುಷ್ಪಾವತಿ ಸೇವಾಪ್ರತಿನಿಧಿ ಶ್ರೀಮತಿ ವನಿತ ಕಾರ್ಯಕ್ರಮ ನಿರೂಪಿಸಿದರು.