ಅಜ್ಜಾವರ : ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆಗೆ ಪೂರ್ವಭಾವಿ ಸಭೆ

0

 

ಪ್ರತೀ‌ ಮನೆಯಲ್ಲೂ ರಾಷ್ಟ್ರ ಧ್ವಜ ಹಾರಿಸಲು ಸಂಕಲ್ಪ

ಅಜ್ಜಾವರ ಗ್ರಾಮ ಪಂಚಾಯಿತಿಯಲ್ಲಿ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಆಚರಣೆ ಮತ್ತು ಮನೆ ಮನೆಗೆ ರಾಷ್ಟ್ರ ಧ್ವಜ ವಿತರಣೆಯ ಕುರಿತು ಪೂರ್ವಭಾವಿ ಸಭೆ ಅಜ್ಜಾವರ ಪಂಚಾಯತ್ ನಲ್ಲಿ ನಡೆಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸತ್ಯವತಿ ಬಸವನಪಾದೆ ಮತ್ತು ಉಪಾಧ್ಯಕ್ಷರಾದ ಲೀಲಾ ಮನಮೋಹನ್ ಮುಡೂರು,ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಆಶಾಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದವರು, ಅಂಗನವಾಡಿ ಕಾರ್ಯಕರ್ತರು, ಪಂಚಾಯತ್ ಸಿಬ್ಬಂದಿ ವರ್ಗ ಮತ್ತು ಗ್ರಾಮಸ್ಥರು ಹಾಜರಿದ್ದರು.

ಪ್ರತೀ ಮನೆಯಲ್ಲೂ ರಾಷ್ಟ್ರ ಧ್ವಜ ಹಾರಿಸಲು ಸಂಕಲ್ಪ ಕೈಗೊಳ್ಳಲಾಯಿತು.

LEAVE A REPLY

Please enter your comment!
Please enter your name here