ಮದೆನಾಡಿನಲ್ಲಿ ಭೂಕುಸಿತ ಆತಂಕ : ಇಂದು ಮತ್ತು ನಾಳೆ ರಾತ್ರಿ ಸಂಪಾಜೆ – ಮಡಿಕೇರಿ ಹೆದ್ದಾರಿ ಬಂದ್

0

 

 

ಮಡಿಕೇರಿಯ ಮದೆನಾಡು ಎಂಬಲ್ಲಿ ಭೂ ಕುಸಿತದ ಭೀತಿ ಇರುವುದರಿಂದ ಇಂದು ಮತ್ತು ನಾಳೆ ರಾತ್ರಿ 8.30 ರಿಂದ ಬೆಳಗ್ಗೆ 6.30 ಗಂಟೆಯವರೆಗೆ ಮಡಿಕೇರಿ – ಸಂಪಾಜೆ ಹೆದ್ದಾರಿ ಬಂದ್ ಮಾಡಲಾಗುವುದು ಎಂದು‌ ಕೊಡಗು ಜಿಲ್ಲಾಡಳಿತ ತಿಳಿಸಿದೆ.

ಮದೆನಾಡು ಬಳಿ ಭೂಕುಸಿತದ ಭೀತಿಯಿದೆ. ಯಾವುದೇ ಕ್ಷಣದಲ್ಲಿ ಮಣ್ಣು ಜರಿದು ಹೆದ್ದಾರಿಗೆ ಬೀಳುವ ಸಾಧ್ಯತೆ ಇದೆ. ಆದ್ದರಿಂದ ಸಂಪಾಜೆ – ಮಡಿಕೇರಿ ನಡುವೆ ಇಂದು ರಾತ್ರಿ 8.30 ರಿಂದ ನಾಳೆ ಬೆಳಗ್ಗೆ 6.30 ಗಂಟೆಯವರೆಗೆ, ಹಾಗೂ ನಾಳೆ ರಾತ್ರಿ 8.30 ಗಂಟೆಯಿಂದ ನಾಡಿದ್ದು ಬೆಳಗ್ಗೆ 6.30 ಗಂಟೆಯವರೆಗೆ ಎಲ್ಲಾ ರೀತಿಯ ವಾಹನ ಸಂಚಾರ ಬಂದ್ ಮಾಡಲಾಗುವುದು. ‌ಸಾರ್ವಜನಿಕರು ಜಿಲ್ಲಾಡಳಿತ ದೊಂದಿಗೆ ಸಹಕಾರ ನೀಡಬೇಕೆಂದು ಕೊಡಗು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಆದೇಶದಲ್ಲಿ ತಿಳಿಸಿದ್ದಾರೆ.