ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ವತಿಯಿಂದ ಇತ್ತೀಚೆಗೆ ಬರೆ ಜರಿದು ಮನೆ ಕಳೆದುಕೊಂಡ ತೇಜಕುಮಾರ್ ಕಜ್ಜೋಡಿ ಮನೆಯವರಿಗೆ ಇಂದು 2 ಲಕ್ಷ ವಿತರಿಸಲಾಯಿತು. ತಾರಾಮತಿ ಕಜ್ಜೋಡಿ ಹಣ ಸ್ವೀಕರಿಸಿದರು.
ಲಯನ್ಸ್ ಅಧ್ಯಕ್ಷ ರಂಗಯ್ಯ ಶೆಟ್ಟಿಗಾರ್, ಕಾರ್ಯದರ್ಶಿ ಸತೀಶ್ ಕೂಜುಗೋಡು, ಕೋಶಾಧಿಕಾರಿ ರಾಮಚಂದ್ರ ಪಳಂಗಾಯ, ಮೋಹನ್ದಾಸ್ ರೈ, ವಿಮಲಾ ರಂಗಯ್ಯ, ಹರಿಹರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್ ಕೂಜುಗೋಡು ಮತ್ತಿತರರು ಉಪಸ್ಥಿತರಿದ್ದರು.