ಬೆಳ್ಳಾರೆಯ ಬಂಗ್ಲೆಗುಡ್ಡೆಯಲ್ಲಿ ಸ್ವಾತಂತ್ರ್ಯದ ಅಮೃತಮಹೋತ್ಸವ ಆಚರಣೆ

0

 

ಬೆಳ್ಳಾರೆಯ ಬಂಗ್ಲೆಗುಡ್ಡೆಯಲ್ಲಿ ಸ್ವಾತಂತ್ರ್ಯದ ಅಮೃತಮಹೋತ್ಸವ ಆಚರಣೆ ನಡೆಯಿತು.


ಸಚಿವ ಎಸ್.ಅಂಗಾರರವರು ಧ್ವಜಾರೋಹಣ ನೆರವೇರಿಸಿ ಬೆಳ್ಳಾರೆಯ ಐತಿಹಾಸಿಕ ಸ್ಥಳ ಬಂಗ್ಲೆಗುಡ್ಡೆಯ ಮಹತ್ವವನ್ನು ವಿವರಿಸಿದರು.

ವೇದಿಕೆಯಲ್ಲಿ ತಹಶೀಲ್ದಾರ್ ಅನಿತಾಲಕ್ಷ್ಮೀ, ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ,ಸಿ.ಡಿ.ಪಿ.ಒ ಶ್ರೀಮತಿ ರಶ್ಮಿ ಕೆ.ಎಂ, ಗ್ರಾಮ ಪಂಚಾಯತ್ ಪಿ.ಡಿ.ಒ ಶ್ರೀಮತಿ ಅನುಷಾ , ಚಂದ್ರ ಕೋಲ್ಚಾರ್, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಗೌರಿ ನೆಟ್ಟಾರು,ಶ್ರೀನಾಥ್ ಬಾಳಿಲ ,ಕೆ.ಪಿ.ಎಸ್.ಉಪಪ್ರಾಂಶುಪಾಲರಾದ ಉಮಾ ಕುಮಾರಿ ಉಪಸ್ಥಿತರಿದ್ದರು.

 


ಶಿಕ್ಷಕ ರಾಮಚಂದ್ರ ಭಟ್ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರು,ಶಾಲಾ ವಿದ್ಯಾರ್ಥಿಗಳು,
ಇಲಾಖೆಯವರು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.