ಆ.15ರಂದು ಸ್ವಾತಂತ್ರ್ಯೋತ್ಸವ – ಕೇಪು ಸುಂದರ ಮಾಸ್ತರ್ ರಿಂದ ದತ್ತಿನಿಧಿ ವಿತರಣೆ

0

 

ಆ.15ರಂದು ಸ್ವಾತಂತ್ರ್ಯೋತ್ಸವದ ಅಂಗವಾಗಿ ನಿವೃತ್ತ ಶಿಕ್ಷಕ ಹಾಗೂ ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಮಾಜಿ ಅಧ್ಯಕ್ಷ ಕೇಪು ಸುಂದರ ಮಾಸ್ತರ್ ರಿಂದ ಕಲಿಕೆಯಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ದತ್ತಿನಿಧಿ ವಿತರಣೆ- ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಬೊಳುಬೈಲು ಯುವಕ ಮಂಡಲ ವತಿಂದ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.

ಮಡಿಕೇರಿ ಅಕಾಶವಾಣಿ ಉದ್ಘೋಷಕ ವಿನೋದ್ ಮೂಡಗದ್ದೆ ಉಪನ್ಯಾಸ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಸುಳ್ಯ ತಾಲೂಕು ಟೈಲರ್ ಅಸೋಸಿಯೇಶನ್ ಅಧ್ಯಕ್ಷ ದಿವಾಕರ ಟೈಲರ್ ಜಾಲ್ಸೂರು ಅವರಿಂದ ಬಡ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ ನಡೆಯಲಿದೆ.