ಬೆಳ್ಳಾರೆಯ ಬಂಗ್ಲೆಗುಡ್ಡೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

0

 

ಬೆಳ್ಳಾರೆಯ ಬಂಗ್ಲೆಗುಡ್ಡೆಯಲ್ಲಿ ಸ್ವಾತಂತ್ರ್ಯದ ಅಮೃತಮಹೋತ್ಸವ ಆಚರಣೆ ನಡೆಯಿತು.

ಸಿ.ಡಿ.ಪಿ.ಒ. ರಶ್ಮಿ ಕೆ.ಎಂ. ಧ್ವಜಾರೋಹಣ ನೆರವೇರಿಸಿ ಬೆಳ್ಳಾರೆಯ ಐತಿಹಾಸಿಕ ಸ್ಥಳ ಬಂಗ್ಲೆಗುಡ್ಡೆಯ ಮಹತ್ವದ ಬಗ್ಗೆ ಮಾತನಾಡಿದರು.
ನಂತರ ಹಿಂದುಳಿದ ಇಲಾಖೆಯ ವಸತಿ ನಿಲಯದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ
,ಕೆ.ಪಿ.ಎಸ್.ಪ್ರಾಂಶುಪಾಲರಾದ ವಿಶ್ವನಾಥ್, ಉಪಪ್ರಾಂಶುಪಾಲರಾದ ಉಮಾ ಕುಮಾರಿ, ಕೆ.ಪಿ.ಎಸ್.ನ ಎಸ್.ಡಿ.ಎಂ.ಸಿ.ಉಪಾಧ್ಯಕ್ಷ ಶ್ರೀನಾಥ್ ರೈ ಬಾಳಿಲ, ಹಿರಿಯ ಪ್ರಾಥಮಿಕ ಶಾಲಾ ಮುಖ್ಯಗುರು ಮಾಯಿಲಪ್ಪ, ಪಂಚಾಯತ್ ಸಿಬ್ಬಂದಿಗಳು ,ವಿದ್ಯಾರ್ಥಿಗಳುಉಪಸ್ಥಿತರಿದ್ದರು.