ಆಲೆಟ್ಟಿ ಯುವಕ ಮಂಡಲದ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

0

ಆಲೆಟ್ಟಿ ಯುವಕ ಮಂಡಲದ ಆಶ್ರಯದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಆಚರಣೆ ಆ.15 ರಂದು ಆಚರಿಸಲಾಯಿತು. ಆಲೆಟ್ಟಿ ಸಹಕಾರಿ ಸಂಘದ ನಿವೃತ್ತ ಸಿ.ಇ.ಒ ಸುಧಾಮ ಆಲೆಟ್ಟಿ ಯವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಆಲೆಟ್ಟಿ ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ ಕುಡೆಕಲ್ಲು, ಸದಸ್ಯರಾದ ಮುತ್ತಪ್ಪ ಪೂಜಾರಿ ಮೊರಂಗಲ್ಲು, ವೀಣಾವಸಂತ ಆಲೆಟ್ಟಿ, ಸದಾಶಿವ ದೇವಸ್ಥಾನದ ವ್ಯ.ಸ.ಸದಸ್ಯ ಅಚ್ಚುತ ಮಣಿಯಾಣಿ ಆಲೆಟ್ಟಿ, ಪಿ.ಡಿ.ಒ.ಕೀರ್ತಿಪ್ರಸಾದ್ ಹಾಗೂ ಯುವಕ ಮಂಡಲದ ಪದಾಧಿಕಾರಿಗಳು, ಸದಸ್ಯರು, ಸ್ಥಳೀಯ ನಾಗರಿಕರು, ಪಂ.ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಯುವಕ ಮಂಡಲದ ಉಪಾಧ್ಯಕ್ಷ ಗುರುರಾಜ್ ಭಟ್ ಸ್ವಾಗತಿಸಿದರು, ಗೌರವಾಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ ವಂದಿಸಿದರು. ನಿ.ಪೂ.ಕಾರ್ಯದರ್ಶಿ ಪ್ರವೀಣ್ ಆಲೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here