ಬಾಂಜಿಕೋಡಿಯಿಂದ ಐವರ್ನಾಡು ವರೆಗೆ ಬೃಹತ್ ವಾಹನ ಜಾಥಾ
ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ ನಡೆಯುತ್ತಿದೆ.
ಬಾಂಜಿಕೋಡಿಯಿಂದ ಐವರ್ನಾಡು ವರೆಗೆ ಬೃಹತ್ ವಾಹನ ಜಾಥಾ ನಡೆಯಿತು.
ಮಾಜಿ ವಿಧಾನ ಪರಿಷತ್ ಸದಸ್ಯ ಅಣ್ಣಾವಿನಯಚಂದ್ರ ಜಾಥಾಕ್ಕೆ ಚಾಲನೆ ನೀಡಿದರು.
ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್ ಮನ್ಮಥ, ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ, ಪಿ.ಡಿ.ಒ ಶ್ಯಾಮ್ ಪ್ರಸಾದ್ ,ಪಂಚಾಯತ್ ಉಪಾಧ್ಯಕ್ಷೆ ಸುಜಾತ ಪವಿತ್ರಮಜಲು,ಸದಸ್ಯರು ಹಾಗೂ ನೂರಾರು ಜನರು ಭಾಗವಹಿಸಿದ್ದರು.