ಬೂಡು ಅಂಗನವಾಡಿ ಕೇಂದ್ರದಲ್ಲಿ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ

0

 

ಬಾಲ ವಿಕಾಸ ಸಮಿತಿ ವತಿಯಿಂದ ಸುಳ್ಯದ ಸಹಾಯಕ ಸರಕಾರಿ ಅಭಿಯೋಜಕ ಜನಾರ್ದನ್ ರವರಿಗೆ ಸನ್ಮಾನ

ಸುಳ್ಯ ಬೂಡು ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ಅಮೃತ್ ಮಹೋತ್ಸವ ಕಾರ್ಯಕ್ರಮ ಇಂದು ನಡೆಯಿತು.
ಸಭಾ ಕಾರ್ಯಕ್ರಮದಲ್ಲಿ ಸುಳ್ಯ ನ್ಯಾಯಾಲಯದ ಸಹಾಯಕ ಸರಕಾರಿ ಅಭಿಯೋಜಕ ಜನಾರ್ದನ್ ಅವರಿಗೆ ಸನ್ಮಾನಿಸಿ ಗೌರವಾರ್ಪಣೆ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಭಗವತೀ ಯುವ ಸೇವಾ ಸಂಘದ ಅಧ್ಯಕ್ಷ ಗೋಪಾಲ ಎಸ್ ನಡುಬೈಲು ಸನ್ಮಾನಿಸಿದರು.
ವೇದಿಕೆಯಲ್ಲಿ ಬಾಲ ವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀಮತಿ ಸೌಮ್ಯ, ಭಗವತೀ ಯುವ ಸೇವಾ ಸಂಘದ ಗೌರವ ಅಧ್ಯಕ್ಷ ರಾಧಾಕೃಷ್ಣ ರೈ ಬೂಡು, ಎಸ್ ಬಿಐ ನ ನಿವೃತ್ತ ಮೆನೇಜರ್ ಜನಾರ್ದನ್ ನಾಯಕ್, ನ್ಯಾಯವಾದಿ ಭಾಸ್ಕರ್ ರಾವ್, ಬಾಲವಿಕಾಸ ಸಮಿತಿ ಸದಸ್ಯ ಸಂಜೀವ ಆಚಾರಿ,ಯುವಮೋರ್ಚಾ ಕಾರ್ಯದರ್ಶಿ ಸುನಿಲ್ ಕೇರ್ಪಳ, ಭಗವತೀ ಯುವ ಸೇವಾ ಸಂಘದ ಸದಸ್ಯರಾದ ವಿಠಲ್ ರೈ,ಪ್ರದೀಪ್ ರೈ, ಇನ್ನರ್ ವ್ಹೀಲ್ ಕ್ಲಬ್ ನ ಸದಸ್ಯರಾದ ಲತಾ ರೈ ಬೂಡು, ಅರಂತೋಡು ಸಹಕಾರಿ ಬೇಂಕ್ ನ ಮೆನೇಜರ್ ವಾಸುದೇವ ನಾಯಕ್, ಅಶೋಕ್ ಅಡ್ಕಾರ್,ಅಂಗನವಾಡಿ ಮಕ್ಕಳ ಪೋಷಕರು ಉಪಸ್ಥಿತರಿದ್ದರು. ಬೂಡು ರಾಧಾಕೃಷ್ಣ ರೈ ಸ್ವಾಗತಿಸಿದರು ವಾಸುದೇವ ನಾಯಕ್ ಕಾರ್ಯಕ್ರಮ ನಿರೂಪಿಸಿ ಅಂಗನವಾಡಿ ಕಾರ್ಯಕರ್ತೆ ಕವಿತಾ ವಂದಿಸಿದರು.