ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ  ಸ್ವಾತಂತ್ರ್ಯ ದಿನಾಚರಣೆ

0

 

ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಸಲಾಯಿತು. ಮಾಜಿ ಸಿಂಡಿಕೇಟ್ ಸದಸ್ಯ ಡಾ. ರಘು ದ್ವಜಾರೋಹಣ ನೆರವೇರಿಸಿ ಮಾತನಾಡಿ ಭಾರತ ಸ್ವಾತಂತ್ರ್ಯ ಪಡೆದು 75 ವರ್ಷ ತುಂಬಿರುವುದು ಒಂದು ಮೈಲುಗಲ್ಲು. ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿರುವ ಮತ್ತು ದೇಶಕ್ಕಾಗಿ ಪ್ರಾಣವನ್ನು ತ್ಯಾಗ ಮಾಡಿರುವ ಮಹಾನ್ ಚೇತನಗಳನ್ನು ನೆನಪಿಸಿಕೊಳ್ಳುವುದು ಇಂದಿನ ದಿನದಲ್ಲಿ ಅಗತ್ಯ ವಾಗಿದೆ. ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಅತ್ಯಂತ ಹೆಮ್ಮೆಯಿಂದ ಆಚರಿಸೋಣ ಎಂದು ಹೇಳಿದರು.


ಮಾಜಿ ನಗರ ಪಂಚಾಯತ್ ಸದಸ್ಯ ಕೆ ಎಂ ಮುಸ್ತಫಾ ಹಾಗೂ ಬ್ಲಾಕ್ ವಕ್ತಾರ ನಂದರಾಜ್ ಸಂಕೇಶ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸುಧೀರ್ ರೈ ಮೇನಾಲ, ಚೇತನ್ ಕಜೆಗದ್ದೆ, ರಾಜು ಪಂಡಿತ್, ಸಿದ್ದಿಕ್ ಕೊಕ್ಕೊ, ಜುಬೆರ್ ಅರಂತೋಡು, ಗಂಗಾಧರ್ ಮೇನಾಲ, ಇಬ್ರಾಹಿಂ ಹಳೇಗೇಟು, ಉಪಸ್ಥಿತರಿದ್ದರು. ಬ್ಲಾಕ್ ಕಾಂಗ್ರೆಸ್ ಮಾಧ್ಯಮ ಸಂಯೋಜಕ ಭವಾನಿ ಶಂಕರ್ ಕಲ್ಮಡ್ಕ ಕಾರ್ಯಕ್ರಮ ನಿರೂಪಿಸಿದರು. ಸುಳ್ಯ ವಿಧಾನ ಸಭಾ ಇಂಟಕ್ ಅಧ್ಯಕ್ಷ ಶಾಫಿ ಕುತ್ತಮೊಟ್ಟೆ ಶುಭಹಾರೈಸಿ ವಂದಿಸಿದರು.

LEAVE A REPLY

Please enter your comment!
Please enter your name here